ಹಾವೇರಿ | ಶಿರಗೋಡ ಗ್ರಾಮದಲ್ಲಿ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ

Date:

Advertisements

“ಪ್ರತಿಯೊಂದು ಜೀವಿ ಜೀವಿಸಲು ಪರಿಸರ ಪ್ರಮುಖ ಪಾತ್ರವಹಿಸುತ್ತದೆ. ಪರಿಸರ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂಬ ಪ್ರಶ್ನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ” ಎಂದು ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಂಸ್ಥೆಯ ಸಹನಿರ್ದೇಶಕರಾದ ಫಾದರ್ ಚೇಸನ್ ಪಾಯ್ಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಿರಗೋಡ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಹಾನಗಲ್ಲ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು. ಗ್ರಾಮ ಪಂಚಾಯ್ ಶಿರಗೋಡ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಗೋಡ ವತಿಯಿಂದ ಪರಿಸರ ಸಂರಕ್ಷಣಾ ಜಾಗೃತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ನಾವು ಜೀವಿಸುತ್ತಿರುವ ಈ ಭೂಮಿಯು ಪ್ರಕೃತಿಯ ಅಮೂಲ್ಯ ಕೊಡುಗೆ. ವನಗಳು ನದಿಗಳು ಪಶು-ಪಕ್ಷಿಗಳು, ಗಾಳಿ,ನೀರು, ಮಣ್ಣು ಇವೆಲ್ಲವೂ ನಮ್ಮ ಬದುಕಿಗೆ ಅವಿಭಾಜ್ಯವಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ ತನ್ನ ಸುಖಕ್ಕಾಗಿ ಪ್ರಕೃತಿಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವುದು ದುರಂತದ ಸಂಗತಿಯಾಗಿದೆ. ಮರ ಕಡಿಯುವುದು ನದಿಗಳನ್ನು ಮಲೀನಗೊಳಿಸುವುದು. ಪ್ಲಾಸ್ಟಿಕ್ ಉಪಯೋಗ ಹೆಚ್ಚಿಸುವುದು ಇವೆಲ್ಲವೂ ಪರಿಸರವನ್ನು ನಾಶಗೊಳಿಸುತ್ತವೆ” ಎಂದು ಹೇಳಿದರು.

ಶಿರಗೋಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಕಿರಣ ಹುಣಸಳ್ಳಿ ಮಾತನಾಡಿ, “ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರವನ್ನು ನಾವು ಕಾಪಾಡಿದರೆ ಮುಂದಿನ ಪೀಳಿಗೆ ನೆಮ್ಮದಿಯಾಗಿ ಉಸಿರಾಡುತ್ತದೆ” ಎಂದು ಹೇಳಿದರು.

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಊರಿನ ಪ್ರಮುಖ ಬಿದಿಗಳಲ್ಲಿ, ಘೋಷಕ ಫಲಕಗಳೊಂದಗೆ ಜಾಥಾದಲ್ಲಿ ಘೋಷಣೆ ಕೂಗಿದರು.

IMG 20250913 WA0191

ಬೀದಿ ನಾಟಕ ಪ್ರದರ್ಶನದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶ್ರಮದಾನ ಮಾಡಿದರು. ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ ಗೋಡೆಯ ಮೇಲೆ ಪರಿಸರ ಜಾಗೃತಿಯ ಕೈ ಬರಹದ ಪೇಂಟಿಂಗ್ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾದಿಕಾರಿಗಳು, ಸಿಬ್ಬಂದಿವರ್ಗ, ಮಹಿಳಾ ಸ್ವ ಸಹಾಯ ಸಂಘದವರು, ಲೊಯೋಲ ಸಂಸ್ಥೆಯ ಸಿಬ್ಬಂದಿ ವರ್ಗದವರು, ಪಂಚಾಯತ ಸಿಬ್ಬಂದಿಯವರು. ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು ಹೊನ್ನಮ್ಮ ವಾಯ್ ಎಸ್ ನಿರೂಪಿಸಿದರು ಫಕ್ಕೀರೇಶ ಸ್ವಾಗತಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X