ಹಾವೇರಿ | ಕಂಪನಿಗಳಿಂದ ಕೋಟ್ಯಂತರ ವಂಚನೆ: ಸಂತ್ರಸ್ತರಿಗೆ ಬರ್ಡ್ಸ್ ಕಾಯ್ದೆಯಡಿ ಹಣ ನೀಡಲು ಸರ್ಕಾರಕ್ಕೆ ಆಗ್ರಹ

Date:

Advertisements

ಕಡಿಮೆ ಅವಧಿಯಲ್ಲಿ ನಿಮ್ಮ ಹಣ ಡಬಲ್ ಮಾಡುತ್ತೇವೆ ಎಂದು ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರೂ. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಹಾವೇರಿ ಜಿಲ್ಲೆಯ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ನಡೆಸಿದ್ದು ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ.

ಈ ಧರಣಿಯಲ್ಲಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆಯ ರಾಜ್ಯಾಧ್ಯಕ್ಷ ಅಪ್ಪಾಸಾಹೇಬ್ ಬುಗಡೆ ಮಾತನಾಡಿ, “ಅನೇಕ ಕಂಪನಿಗಳು ಜಿಲ್ಲೆ ಸೇರಿದಂತೆ ದೇಶಾದ್ಯಂತ ಒಂದು ಸಲ ಹಣ ಠೇವಣಿ ಇಟ್ಟರೆ ಐದು, ಆರು ವರ್ಷಗಳಲ್ಲಿ ದುಪ್ಪಟ್ಟು ಮಾಡಿಕೊಡುತ್ತೇವೆ. ಷೇರು ಹಣ ಪಾವತಿಸಿದರೆ, ಹತ್ತಾರು ಪಟ್ಟು ಲಾಭ ದೊರೆಯುತ್ತದೆ ಎಂದೆಲ್ಲ ನಂಬಿಸಿ ಕೋಟ್ಯಂತರ ರೂ. ಪಾವತಿಸಿಕೊಂಡು ಕಚೇರಿಗಳನ್ನು ಬಂದ್ ಮಾಡಿಕೊಂಡು ಪರಾರಿಯಾಗಿವೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳೇ ಕಾರಣ” ಎಂದು ಆರೋಪಿಸಿದರು.

ಮೊದಲಿಗೆ ಸರಕಾರಗಳೆ ಈ ಕಂಪನಿಗಳಿಗೆ ಲೈಸೆನ್ಸ್ ಕೊಟ್ಟಿತು. 2014-15ರಲ್ಲಿ ಸೆಬಿ ಮುಖಾಂತರ ಎಲ್ಲ ಕಂಪನಿಗಳನ್ನು ಬಂದು ಮಾಡಿ, ಆ ಕಂಪನಿಯಲ್ಲಿರುವ ಹಣವನ್ನು ಜಪ್ತಿ ಮಾಡಿತು. ಈ ಎಲ್ಲ ಹಣ ಸರಕಾರ ವಶದಲ್ಲಿದೆ. ಹತ್ತು ವರ್ಷಗಳಾದರು ಗ್ರಾಹಕರಿಗೆ ಹಣ ಕೊಡುವ ನಿಟ್ಟಿನಲ್ಲಿ ಮನಸ್ಸು ಮಾಡಿಲ್ಲ. ಗ್ರಾಹಕರು ತುಂಬಿದ ಹಣ ಸರಕಾರ ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಕ್ರೂರ ಧೋರಣೆ ಹೊಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಜನರಿಗೆ ಹಾವೇರಿ ಜಿಲ್ಲೆಯೊಂದರಲ್ಲೇ ಒಂದು ಕಂಪನಿ 40 ಕೋಟಿ ರೂ. ವಂಚಿಸಿದೆ. ಇಂತಹ ಅನೇಕ ಸಂಸ್ಥೆಗಳು ವಂಚನೆ ಮಾಡಿವೆ. ವಂಚನೆಗೀಡಾದವರಿಗೆ ಬರ್ಡ್ಸ್ ಕಾಯ್ದೆಯಡಿ ಅರ್ಜಿ ಸ್ವೀಕರಿಸಿ, 180 ದಿನದೊಳಗೆ ಎಲ್ಲ ಅರ್ಜಿದಾರರಿಗೆ ಹಣ ಕೊಡಿಸಬೇಕೆಂದು ಅಪ್ಪಾ ಸಾಹೇಬ್ ಬುಗಡಿ ಆಗ್ರಹಿಸಿದರು.

ಈ ಧರಣಿಯಲ್ಲಿ ಟಿಪಿಜೆಪಿ ಜಿಲ್ಲಾಧ್ಯಕ್ಷ ಸೋಮಶೇಖರೆಡ್ಡಿ ಮೈದೂರ, ಉಪಾಧ್ಯಕ್ಷರು ಸುರೇಶ ಬಸಪ್ಪ ವನಹಳ್ಳಿ, ಕಾರ್ಯದರ್ಶಿ : ಸೈಯ್ಯದಸಾಬ್ ಹುಲಗೂರು, ಶಿಗ್ಗಾವ್ ತಾಲೂಕು ಅಧ್ಯಕ್ಷ, ರಮೇಶ್ ಮರಿಯಪ್ಪ ಹರಿಜನ ಹಾಗೂ ವಂಚನೆಗೆ ಒಳಗಾದ ಸಂತ್ರಸ್ತರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X