ಹಾವೇರಿ | ಶಿವಾನಂದ ಪಾಟೀಲ್ ಹೇಳಿಕೆಗೆ ನೊಂದರೈತ ಆತ್ಮಹತ್ಯೆ; ಶವದೊಂದಿಗೆ ರೈತರ ಪ್ರತಿಭಟನೆ

Date:

Advertisements

ಸಕ್ಕರೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೀಡಿದ್ದ, ʼರೈತರು ಬರಗಾಲ ಬರಲಿ, ಸರ್ಕಾರ ರೈತರ ಬೆಳೆ ಸಾಲ ಮನ್ನಾ ಮಾಡಲೆಂದು ಕಾಯುತ್ತಾರೆʼ ಎಂದು ನೀಡಿದ್ದ ಹೇಳಿಕೆಯಿಂದ ಮನನೊಂದು ತೀವ್ರ ಸಾಲದ ಕಾರಣ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಾಬ್ಳ ಗ್ರಾಮದ ನಿವಾಸಿ ರೈತ ಚಂದ್ರಪ್ಪ ಚನ್ನಾಪುರ ಎಂಬುವರು ಆತ್ಮಹತ್ಯೆಗೆ ಶರಣರಾಗಿರುವ ಘಟನೆ ನಡೆದಿದೆ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಗ್ಗಾವಿ ತಾಲೂಕಿನ ಅಪೂರ್ ಕ್ಲಸ್ಟರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ರೈತನ ಮರಣೋತ್ತರ ಪರೀಕ್ಷೆ ನಡೆದ ಬಳಿಕ ದಾವಾಖಾನೆ ಹೊರಗೆ ಶವದೊಂದಿಗೆ ಪ್ರತಿಭಟನೆ ನಡೆಸಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು.

ಶಿಗ್ಗಾವಿ ತಾಲೂಕು ತಹಶೀಲ್ದಾರ್ ಹಾಗೂ ಸಿಪಿಐ ಮಲಗುಂದ ಹಾಗೂ ಪಿಎಸ್ಐ ಬಂಕಾಪುರ ಮತ್ತು ಕಂದಾಯ ಇಲಾಖಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, “ಮೃತ ರೈತನ ಕುಟುಂಬಕ್ಕೆ ಪರಿಹಾರ ಕೊಡುತ್ತೇವೆಂದು ಭರವಸೆ ನೀಡಿ. ಮುಂದೆ ಇಂತಹ ದುರ್ಘಟನೆ ನಡೆಯದಂತೆ ಜಿಲ್ಲಾಡಳಿತದಿಂದ ಜಾಗೃತಿ ವಹಿಸುತ್ತೇವೆ” ಎಂದು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ವಿದ್ಯಾರ್ಥಿ ಆತ್ಮಹತ್ಯೆ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ಅಧಿಕಾರಿಗಳ ಭರವಸೆ ಬಳಿಕ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಈ ವೇಳೆ ರಾಜು ಪವಾರ್, ಸಂಗಮೇಶ್ ಪೀತಾಂಪುರ ಶೆಟ್ಟಿ, ಚೆನ್ನಪ್ಪ ಮರಡೂರ್, ಮುಲ್ಲಾ, ಭುವನೇಶ್ವರ್ ಶಿಡ್ಲಪುರ್, ಜಗದೀಶ್ ಬಳ್ಳಾರಿ, ಶೇಖಪ್ಪ ಹಲಸೂರ್, ಚೋನಪ್ಪ ಪೂಜಾರಿ, ಎಂ ಎನ್ ನಾಯಕ್, ಶಿವನಪ್ಪ ಪೂಜಾರಿ, ಮುತ್ತು ಗುಡ್ಡಿಗೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X