ಹಾವೇರಿ | ಆರೋಗ್ಯ ಇಲಾಖೆಯ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯಲು ರೈತ ಸಂಘ ಮನವಿ

Date:

“ಪ್ರತಿ ತಿಂಗಳಿನಲ್ಲಿ 30 ಹೆರಿಗೆಗಳು ಇಲ್ಲದ ಕಾರಣ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಪರಿವರ್ತನೆ ಮಾಡಿದ್ದಾರೆ. ಇದು ಜನಸಾಮಾನ್ಯರ ಮೇಲೆ ಕೈಗೊಂಡ ಕರಾಳ ಆದೇಶ. ಈ ಆದೇಶವನ್ನು ಹಿಂಪಡೆಯಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಕಿಡಿಕಾರಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಆರೋಗ್ಯ ಇಲಾಖೆಯ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯುವ ಕುರಿತು ಕರ್ನಾಟಕ ರಾಜ್ಯ ರೈತ ಸಂಘಹಾಗು ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

“ಆಸ್ಪತ್ರೆಗಳಲ್ಲಿ ಹೆರಿಗೆ ತಜ್ಞರು ನೇಮಕ ಇಲ್ಲ. ಅರವಳಿಕೆ ತಜ್ಞರು ಇರುವುದಿಲ್ಲ. ಒಳ್ಳೆಯ ಸೌಲಭ್ಯದಿಂದ ಕೂಡಿದ ಪ್ರಯೋಗಾಲಯಗಳು ಇಲ್ಲ. ಸೌಲಭ್ಯಗಳನ್ನು ನೀಡದೇ ಈ ರೀತಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುವುದು ಮಹಾ ತಪ್ಪು” ಎಂದರು.

“ಪ್ರತಿ ತಾಲೂಕ ಕೇಂದ್ರದಿಂದ ಸುಮಾರು 30-35 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಗಳ ಜನಸಾಮಾನ್ಯರಿಗೆ ಹಾವು ಕಚ್ಚಿದರೆ, ವಿದ್ಯುತ್ ಸ್ಪರ್ಶ, ಕಾಡು ಮೃಗಗಳಿಂದ ಹಾನಿಯಾದರೆ, ವಿಷಪ್ರಾಶನವಾದರೆ, ಅಪಘಾತ ಸಂಭವಿಸಿದರೆ, ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಾದರೆ, ತುರ್ತು ಸಮಸ್ಯೆಗಳು, ಹೆರಿಗೆ ಸಮಸ್ಯೆಯಾದಾಗ, ದೂರದಿಂದ ಬರುವುದು ಬಹಳ ಕಷ್ಟವಾಗುತ್ತದೆ. ತುರ್ತು ಚಿಕಿತ್ಸೆ ಸಿಕ್ಕರೆ ಅವರ ಜೀವ ಉಳಿಸಬಹುದು. ಇಂತಹ ಅವೈಜ್ಞಾನಿಕ ತೀರ್ಮಾನದ ಆದೇಶದಿಂದ ಜನರ ಜೀವಕ್ಕೆ ಅಪಾಯವಾಗುತ್ತದೆ ಇದನ್ನು ಸರ್ಕಾರಕ್ಕೆ ಮಾನ್ಯ ಶಾಸಕರು ಮನವರಿಕೆ ಮಾಡಿಸಬೇಕು” ಎಂದು ಮನವಿ ಮಾಡಿದರು. 

“ಪ್ರತಿ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಸೌಲಭ್ಯ ಕಲ್ಪಿಸಬೇಕು. ತಜ್ಞ ವೈದ್ಯರನ್ನು ನೇಮಿಸಬೇಕು. ಅರವಳಿಕೆ ತಜ್ಞರನ್ನು ನೇಮಿಸಬೇಕು. ಪ್ರಯೋಗಾಲಯಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಆಸ್ಪತ್ರೆಯ ಮೇಲ್ವಿಚಾರಣೆಗೆ ಅನುಭವಿಕರ ಮಾರ್ಗದರ್ಶನ ಸಮಿತಿ ರಚನೆ ಆಗಬೇಕು. ತಾತ್ಕಾಲಿಕವಾಗಿ ನೇಮಕಗೊಂಡ ಸಿಬ್ಬಂದಿಗಳು ರೋಗಿಗಳ ಜೊತೆಗೆ ಸರಿಯಾಗಿ ನಡೆದುಕೊಳ್ಳುವಂತೆ ಸೂಚಿಸಬೇಕು. ಈ ಎಲ್ಲಾ ವಿಚಾರಗಳನ್ನು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲಿಯ ವಸ್ತು ಸ್ಥಿತಿಯನ್ನು ಸರ್ಕಾರಕ್ಕೆ ವಿವರಿಸಿ ತಕ್ಷಣದಿಂದ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯ ಮಾಡಬೇಬೇಕು” ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕ ಹಾವೇರಿ ಒತ್ತಾಯಿಸುತ್ತದೆ

ಈ ಸಂದರ್ಭದಲ್ಲಿ ಶಿವಯೋಗಿ ಚ ಹೊಸಗೌಡ್ರ, ಸುರೇಶ ಚಲವಾದಿ, ವಿರುಪಾಕ್ಷಪ್ಪ ಗುಡಗೂರ, ಮುಂತಾದವರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...