ಹಾವೇರಿ | ಜೂನ್ 10ರಂದು ರೈತ ಹುತಾತ್ಮ ದಿನಾಚರಣೆ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಪ್ರತಿಭಟನೆ

Date:

“2008ರಲ್ಲಿ ಹಾವೇರಿಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕಾಗಿ ನಡೆದ ರೈತರ ಬೃಹತ್ ಪ್ರತಿಭಟನೆಯ ವೇಳೆ ಪೊಲೀಸರು ಗೋಲಿಬಾರ್ ದಾಳಿಯಲ್ಲಿ ಶಿದ್ಲಿಂಗಪ್ಪ ಚೂರಿ ಹಾಗೂ ಪುಟ್ಟಪ್ಪ ಹೊನ್ನತ್ತಿ ಇಬ್ಬರು ರೈತರು ಹುತಾತ್ಮರಾದ ದಿನ ಜೂನ್ 10ರಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ಮಾಡಲಾಗುವುದು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

- Advertisement -

ಹಾವೇರಿ‌ ಪಟ್ಟಣದ ಪತ್ರಿಕಾ ಭವನದಲ್ಲಿ ರೈತ ಹುತಾತ್ಮಾ ಆಚರಣೆ ಮಾಡುವ ಕುರಿತು ಪತ್ರಿಕಾ ಗೋಷ್ಠಿಯಲ್ಲಿ‌ ಮಾತನಾಡಿದ ಅವರು, “ನಮ್ಮ ಜಿಲ್ಲೆ ಕೃಷಿ ಪ್ರದಾನವಾದದ್ದು. ಇವತ್ತಿನ ಪರಿಸ್ಥಿತಿಯಲ್ಲಿ ರೈತರಿಗೆ ಭದ್ರತೆಯಿಲ್ಲ. ರೈತರು ಹೊಲದಲ್ಲಿ ಬೀಜ ಬಿತ್ತಿದ್ದು, ಮಳೆ ಕಡಿಮೆ ಆಗುತ್ತಿದೆ. ಇದರಿಂದ ರೈತರು ಆತಂಕದಲ್ಲಿದ್ದಾರೆ.” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೇಂದ್ರ ಸರ್ಕಾರ ಮಕ್ಕೆಜೋಳ ಬೀಜಕ್ಕೆ ಎಲ್ಲ ಕಂಪನಿಗಳು ಒಂದೇ ದರ ನಿಗದಿಮಾಡಬೇಕು. ರಸಗೊಬ್ಬರದ ಬೆಲೆ ಏರಿಕೆಯನ್ನು‌ ನಿಯಂತ್ರಿಸಬೇಕು. 2025-26ನೇ ಸಾಲಿನ ಬೆಳೆವಿಮೆಯಲ್ಲಿ ಸಾಕಷ್ಟು ಅನ್ಯಾಯವಾಗಿದ್ದು, ಎಂಬತ್ತರಿಂದ ತೊಂಬತ್ತು ಕೋಟಿ ಹಣ ಬರಬೇಕು. ಕೂಡಲೇ ಮರು ಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು. ವರದಾ ಬೇಡ್ತಿ ನದಿ ಜೋಡನೆಯ ಕುರಿತು ರಾಜ್ಯ ಸರ್ಕಾರ ಕೇಂದ್ರದ ಕಡೆ ಬೊಟ್ಟು ಮಾಡುವರು, ಸಂಸದ ಬಸವರಾಜ ಬೊಮ್ಮಾಯಿ ಅವರೇ ಮುಂದೆ ಬಂದು ಜೋಡನೆಗೆ ಕೇಂದ್ರ ಸರಕಾರದ ಜೊತೆಗೆ ಮಾತನಾಡುವೆ ಎಂದು ಹೇಳಿದ್ದರು. ಈಗ ಅವರು ಮಾತನಾಡುತ್ತಿಲ್ಲ. ರಾಜಕೀಯ ಮಾಡುವುದನ್ನು ಬಿಟ್ಟು, ವರದಿ ಬೇಡ್ತಿ ನದಿ ಜೋಡಣೆಗೆ ಶೀಘ್ರದಲ್ಲಿ ಜಾರಿಗೋಳಿಸಬೇಕು. ವಿದ್ಯುತ್ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಇದರಿಂದ ರೈತರಿಗೆ ಅನ್ಯಾಯ ಆಗುತ್ತದೆ” ಎಂದು ಹೇಳಿದರು.

“ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಹುತಾತ್ಮ ದಿನಾಚರಣೆಯನ್ನು ನಗರದ ಸಿದ್ದಪ್ಪ ಸರ್ಕಲ್ ಹತ್ತಿರ ಆಚರಿಸಲಾಗುವುದ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು” ಎಂದು‌ ಕರೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಗಸಿರು ಸೇನೆ ಜಿಲ್ಲಾಧ್ಯಕ್ಷ ಆರ್. ವಿ. ಕೆಂಚಳ್ಳೇರ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬಂದು ಮೂರು ವರ್ಷಗಳು ಗತಿಸಿವೆ. ಅಧಿಕಾರದ ಕಚ್ಚಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಸಗೊಬ್ಬರ ಮಾರಾಟದಲ್ಲಿ ಕೃಷಿ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಜಿಲ್ಲೆಯಲ್ಲಿ ನದಿಯಿಂದ ಕೆರೆ ತುಂಬಿಸುವ ಯೋಜನೆಗಳು ನೆನಗುದಿಗೆ ಬಿದ್ದಿವೆ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಹುತಾತ್ಮ ದಿನದಂದು ಪ್ರತಿಭಟಿಸಲಾಗುವುದು” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ರೈತ ಮುಖಂಡರು ಮಾಲತೇಶ ಆಲದಕಟ್ಟೆ, ಹೆಚ್.ಹೆಚ್. ಮುಲ್ಲಾ, ಮರಿಗೌಡ ಪಾಟೀಲ, ರಾಜು ತರ್ಲಗಟ್ಟ, ಸುರೇಶ ಚಲವಾದಿ, ಚನ್ನಪ್ಪ ಮರಡೂರು, ಶಿವಯೋಗಿ ಹೊಸಗೌಡ್ರ ಸೇರಿದಂತೆ ಇನ್ನೂ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...