ಹಾವೇರಿ | ಲಕ್ಷ್ಮೀಪುರ ಗ್ರಾಮದಲ್ಲಿ ಲಿಂಗ ಸಮಾನತೆ ಜಾಗೃತಿ ಜಾಥಾ ಕಾರ್ಯಕ್ರಮ

Date:

Advertisements

“ಲಿಂಗ ಸಮಾನತೆ ಎಂಬುವುದು ಒಂದು ಪ್ರಮುಖ ಸಾಮಾಜಿಕ ತತ್ವವಾಗಿದ್ದು, ಪುರುಷರು, ಮಹಿಳೆಯರು ಮತ್ತು ಇತರ ಲಿಂಗಿಗಳೆಲ್ಲರೂ ಸಮಾನ ಹಕ್ಕು, ಅವಕಾಶ, ಗೌರವ ಮತ್ತು ತಿರ್ಮಾನಗಳಲ್ಲಿ ಸಮನಾಗಿ ಪಾಲ್ಗೊಳ್ಳಬೇಕು ಎಂಬುವುದನ್ನು ಒತ್ತಿ ಹೇಳುತ್ತದೆ” ಎಂದು ಲಿಂಗ ಸಮಾನತೆ ಜಾಗೃತಿ ಜಾಥದಲ್ಲಿ ಲೊಯೋಲ ವಿಕಾಸ ಕೇಂದ್ರ ಸಂಸ್ಥೆಯ ನಿರ್ದೇಶಕರಾದ ಫಾದರ್ ವಿನ್ಸೆಂಟ್ ಜೇಸನ್ ಹೇಳಿದರು.

 ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಹಾನಗಲ್ಲ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು, ಗ್ರಾಮ ಪಂಚಾಯತ್ ಮಂತಗಿ ಹಾಗೂ ಲಕ್ಷ್ಮೀಪುರ ಗ್ರಾಮ ಸಂಯುಕ್ತ ಆಶ್ರಯದಲ್ಲಿ ಲಿಂಗ ಸಮಾನತೆ ಜಾಗೃತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

“ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಾನ ಸಾಧನೆ ಸಾಧ್ಯ ಮಹಿಳೆಯರು ಬಲಿಷ್ಠರಾಗಲಿ ಎಂಬುವುದಲ್ಲ, ಅವರು ಈಗಾಗಲೆ ಬಲಿಷ್ಠರು, ಅವರ ಬಲವನು ಗುರುತಿಸಿ ಅವಕಾಶ ನೀಡಿದರೆ ಸ್ವಾವಲಂಭಿಯಾಗಿ ಬೆಳೆಯುತ್ತಾರೆ” ಎಂದರು.

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣಾ ಫಲಕಗಳೊಂದಗೆ ಜಾಥಾ ಹೊರಟು ಘೋಷಣೆ ಕೂಗಿದರು. ಬೀದಿ ನಾಟಕದ ಪ್ರದರ್ಶನದೊಂದಿಗೆ ಲಿಂಗಸಮಾನತೆ ಕುರಿತು ಜಾಗೃತಿ ಮೂಡಿಸಿದರು.

ಲಕ್ಷ್ಮೀಪುರ ಗ್ರಾಮದ ಶಾಲೆಯ ಕೌಂಪೌಂಡ ಗೋಡೆಯ ಮೇಲೆ ಪರಿಸರ ಸಂರಕ್ಷಣೆ ಕುರಿತು ಚಿತ್ರ ಬಿಡಿಸುವ ಮೂಲಕ ಶಾಲಾ ಹೊರಾಂಗಣದಲ್ಲಿ ಶ್ರಮಧಾನ ಮಾಡಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀಪುರ ಗ್ರಾಮಸ್ಥರು, ಲೊಯೋಲ ವಿಕಾಸ ಕೇಂದ್ರದ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಸಂತ ಅಲೋಶಿಯಸ್ ವಿಶ್ವವಿಧ್ಯಾಲಯದ ವಿಧ್ಯಾರ್ಥಿಗಳು, ಗ್ರಾಮ ಪಂಚಾಯತ ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು. ಕಾರ್ಯಕ್ರವನ್ನು ಫಕ್ಕೀರೇಶ ಗೌಡಳ್ಳಿ ನಿರೂಪಿಸಿದರು. ಹೊನ್ನಮ್ಮ ಸ್ವಾಗತಿಸಿದರು, ಮೈಲಾರಿ ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X