ಹಾವೇರಿ | ರಾಷ್ಟೀಯ ಹೆದ್ದಾರಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಹೆಚ್ಚಿನ ಹಣ ವಸೂಲಿ: ರೈತ ಸಂಘ ಆಕ್ರೋಶ

Date:

Advertisements

ರಾಷ್ಟೀಯ ಹೆದ್ದಾರಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಹೆಚ್ಚಿನ ಹಣ ವಸೂಲಿ ಮಾಡಿ ಸವಾರರಿಗೆ ಕಿರಿ ಕಿರಿ ಮಾಡುತ್ತಿದ್ದಾರೆ. ಇದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಯಾವುದೇ ಕಾರಣಕ್ಕೂ ಟೋಲ್ ನಾಕದಲ್ಲಿ ವಸೂಲಿ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಅಧ್ಯಕ್ಷ ಹಣಮಂತಪ್ಪ ಕಬ್ಬಾರ ಅಸಮಾಧಾನ ವ್ಯಕ್ತಪಡಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ  ರಾಷ್ಟೀಯ ಹೆದ್ದಾರಿ ಸಾರ್ವಜನಿಕರು ಮತ್ತು ರೈತರಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘವು ಹೆದ್ದಾರಿ ಬಂದ್ ಮಾಡಿ ಮಾತನಾಡಿದರು.

“ಠಾಣೇಬೆನ್ನೂರು ತಾಲ್ಲೂಕ ಚಳಗೇರಿ ಗ್ರಾಮ ಪಂಚಾಯತ ಮತ್ತು ಶಿಗ್ಗಾಂವ ತಾಲೂಕ ಬಂಕಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಟೋಲ್ನಾಕ ನಿರ್ಮಾಣವಾಗಿದ್ದು ಈಗಾಗಲೇ ನಾಲ್ಕೈದು ತಿಂಗಳಿಂದ ಸ್ಥಳೀಯ ಸಾರ್ವಜನಿಕರು ಹಾಗೂ ರೈತರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ವಸೂಲಿಯನ್ನು ಬಿಡಬೇಕು” ಎಂದರು.

Advertisements

“ಇನ್ನೂ ಅಲ್ಲಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಸರಿಪಡಿಸುವವರೆಗೂ ಯಾವುದೇ ಕಾರಣಕ್ಕೂ ಟೋಲ್ ಫೀ ವಸೂಲಿ ಮಾಡಬಾರದು. ಟೋಲ್ ನಾಕಾದಲ್ಲಿ ಸಾರ್ವಜನಿಕರಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ರಾಷ್ಟೀಯ ಹೆದ್ದಾರಿ ಸಂಬಂಧಪಟ್ಟ ನಿಯಮಾವಳಿಗಳ ಪ್ರಕಾರ ಸ್ಥಳೀಯ ಸಾರ್ವಜನಿಕರಿಗೂ ಮತ್ತು ರೈತರಿಗೂ ಹಣ ವಸೂಲಿ ಮಾಡುವಂತಿಲ್ಲ. ಆದರೆ ಹಣ ವಸೂಲಿ ಮಾಡುವುದರ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಇದು ನಿಲ್ಲಬೇಕು” ಎಂದು ಒತ್ತಾಯಿಸಿದರು.

“ಒಂದು ವೇಳೆ ಸರಿಪಡಿಸದಿದ್ದರೆ ಅಹೋರಾತ್ರಿ ಧರಣಿ ಮಾಡಲಾಗುವುದು” ಎಂದು ಹಣಮಂತಪ್ಪ ಕಬ್ಬಾರ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೌಹಾರ್ದತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ : ಬಾ.ಹ.ರಮಾಕುಮಾರಿ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಕಾರ್ಯಕರ್ತರು, ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X