ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

Date:

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ ಹಾವೇರಿ ಜಿಲ್ಲಾಧ್ಯಕ್ಷ ಎಂ ಎನ್ ನಾಯಕ್ ಆಗ್ರಹಿಸಿದರು.

ಹಾವೇರಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಕೃಷಿ ಇಲಾಖೆಗೆ ಮನವಿ ಸಲ್ಲಿಸಿ ಮಾತಮಾಡಿದರು.

“ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್ ನಂತರ ರೈತರು ಅನ್ಯಾಯಕ್ಕೆ ಒಳಗಾಗಿ ತನ್ನ ಧೈರ್ಯ ಮತ್ತು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಮಾರ್ಚ್‌ 11ರಂದು ಅನಿರೀಕ್ಷಿತ ಘಟನೆ ನಡೆದಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಾದರೂ ರೈತರಿಗರ ಕಮಿಟಿ ರಚನೆ ಮಾಡಿ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೈತರ ಕೆಲಸ ದೇಶಕ್ಕೆ ಕೃಷಿ ಉತ್ಪನ್ನಗಳನ್ನು ಬೆಳೆದು ಕೊಡುವುದು. ಅದಕ್ಕೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ದುಬಾರಿ ಬೀಜಗಳನ್ನು ಮತ್ತು ಕೀಟನಾಶಕಗಳನ್ನು ಬಳಸಿ ಒಳ್ಳೆಯ ಬೆಳೆಯನ್ನು ಬೆಳೆದು ಕರ್ನಾಟಕಕ್ಕೆ ಒಣ ಮೆಣಸಿನಕಾಯಿ ರೂಪದಲ್ಲಿ ಕೊಟ್ಟಿದ್ದಾರೆ. ರೈತರು ಕಳೆದ ವರ್ಷ ಬ್ಯಾಡಗಿ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿಗೆ ₹40,000 ಬೆಲೆ ನೋಡಿ ಈ ವರ್ಷ ತೆಗೆದುಕೊಂಡಿರುವ ಸಾಲವನ್ನು ತೀರಿಸಬಹುದೆಂದು ಉತ್ತಮ ಗುಣಮಟ್ಟದ ಮೆಣಸಿನಕಾಯಿಯನ್ನು ಬೆಳೆದು ಮಾರುಕಟ್ಟೆಗೆ ತಂದಿದ್ದಾರೆ” ಎಂದು ಹೇಳಿದರು.

“ಮಾರುಕಟ್ಟೆಯಲ್ಲಿ ಕೆಲವು ಮಧ್ಯವರ್ತಿಗಳ ಹಾವಳಿ ಹಾಗೂ ಗುಜರಾತಿನ ಗುಂದಲ್ ಮಾರ್ಕೆಟ್‌ನ ಬೆಲೆ ಏರಿಳಿತದ ಕಾರಣ ಮತ್ತು ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಸರ್ಕಾರಿ ಗೋದಾಮುಗಳಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಇಡಲು ಖಾಸಗಿ ಮಾರಾಟಗಾರರ ಹಾವಳಿಯಿಂದ ಅವಕಾಶ ಇಲ್ಲದಂತಾಗಿದ್ದು, ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗ ಸಂವಹನ ಅಂತರದಿಂದ ಈ ಘಟನೆ ಉಂಟಾಗಿದೆ. ಹಾಗಾಗಿ ರೈತರ ವಿರುದ್ಧ ಯಾವುದೇ ಮೊಕದ್ದಮೆ ದಾಖಲು ಮಾಡಬಾರದು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಯಾರಿಗೂ ಅವಕಾಶವಿಲ್ಲ: ಜಿಲ್ಲಾಧಿಕಾರಿ

“ಜಿಲ್ಲಾಧಿಕಾರಿಗಳಾದ ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವರು, ರೈತರಿಗೆ ಒಳ್ಳೆಯ ಮಾರುಕಟ್ಟೆ ಒದಗಿಸಬೇಕು. ರೈತರ ಕೆಲಸ ದೇಶಕ್ಕೆ ಹಾಗೂ ರಾಜ್ಯಕ್ಕೆ ಕೃಷಿ ಉತ್ಪನ್ನಗಳನ್ನು ಉತ್ಪಾದಿಸಿ ಕೊಡುವುದು, ಬ್ಯಾಡಗಿ ಮೆಣಸಿನಕಾಯಿ ಇಡೀ ಜಗತ್ತಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದು, ಇಡೀ ಜಗತ್ತಲ್ಲಿ ಬ್ಯಾಡಗಿ ಮೆಣಸಿನಕಾಯಿಗೆ ಒಳ್ಳೆಯ ಮಾರ್ಕೆಟ್ ಇದ್ದಮೇಲೆ ಯಾಕೆ ಇಂಥ ಘಟನೆ ಉಂಟಾಯಿತು. ತಾವು ಒಂದು ತಂಡವನ್ನು ರಚನೆ ಮಾಡಿ ಶೀಘ್ರದಲ್ಲೇ ತಪ್ಪಿಸ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಸಿ ಹಾಗೂ ಎಸಿ ರಹಿತ ಗೋಡೌನ್‌ಗಳನ್ನು ಕಟ್ಟಿಸಿಕೊಟ್ಟು ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಶೇಖರಣ ಸೌಲಭ್ಯ ಮಾಡಿದ್ದಲ್ಲಿ ಇಂತಹ ಅನಿರೀಕ್ಷಿತ ಹಾಗೂ ಕಾನೂನು ಬಾಹಿರ ಘಟನೆಗಳನ್ನು ತಡೆಗಟ್ಟಬಹುದು” ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...