ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

Date:

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ ಹಾವೇರಿ ಜಿಲ್ಲಾಧ್ಯಕ್ಷ ಎಂ ಎನ್ ನಾಯಕ್ ಆಗ್ರಹಿಸಿದರು.

- Advertisement -

ಹಾವೇರಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಕೃಷಿ ಇಲಾಖೆಗೆ ಮನವಿ ಸಲ್ಲಿಸಿ ಮಾತಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್ ನಂತರ ರೈತರು ಅನ್ಯಾಯಕ್ಕೆ ಒಳಗಾಗಿ ತನ್ನ ಧೈರ್ಯ ಮತ್ತು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಮಾರ್ಚ್‌ 11ರಂದು ಅನಿರೀಕ್ಷಿತ ಘಟನೆ ನಡೆದಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಾದರೂ ರೈತರಿಗರ ಕಮಿಟಿ ರಚನೆ ಮಾಡಿ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

“ರೈತರ ಕೆಲಸ ದೇಶಕ್ಕೆ ಕೃಷಿ ಉತ್ಪನ್ನಗಳನ್ನು ಬೆಳೆದು ಕೊಡುವುದು. ಅದಕ್ಕೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ದುಬಾರಿ ಬೀಜಗಳನ್ನು ಮತ್ತು ಕೀಟನಾಶಕಗಳನ್ನು ಬಳಸಿ ಒಳ್ಳೆಯ ಬೆಳೆಯನ್ನು ಬೆಳೆದು ಕರ್ನಾಟಕಕ್ಕೆ ಒಣ ಮೆಣಸಿನಕಾಯಿ ರೂಪದಲ್ಲಿ ಕೊಟ್ಟಿದ್ದಾರೆ. ರೈತರು ಕಳೆದ ವರ್ಷ ಬ್ಯಾಡಗಿ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿಗೆ ₹40,000 ಬೆಲೆ ನೋಡಿ ಈ ವರ್ಷ ತೆಗೆದುಕೊಂಡಿರುವ ಸಾಲವನ್ನು ತೀರಿಸಬಹುದೆಂದು ಉತ್ತಮ ಗುಣಮಟ್ಟದ ಮೆಣಸಿನಕಾಯಿಯನ್ನು ಬೆಳೆದು ಮಾರುಕಟ್ಟೆಗೆ ತಂದಿದ್ದಾರೆ” ಎಂದು ಹೇಳಿದರು.

“ಮಾರುಕಟ್ಟೆಯಲ್ಲಿ ಕೆಲವು ಮಧ್ಯವರ್ತಿಗಳ ಹಾವಳಿ ಹಾಗೂ ಗುಜರಾತಿನ ಗುಂದಲ್ ಮಾರ್ಕೆಟ್‌ನ ಬೆಲೆ ಏರಿಳಿತದ ಕಾರಣ ಮತ್ತು ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಸರ್ಕಾರಿ ಗೋದಾಮುಗಳಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಇಡಲು ಖಾಸಗಿ ಮಾರಾಟಗಾರರ ಹಾವಳಿಯಿಂದ ಅವಕಾಶ ಇಲ್ಲದಂತಾಗಿದ್ದು, ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗ ಸಂವಹನ ಅಂತರದಿಂದ ಈ ಘಟನೆ ಉಂಟಾಗಿದೆ. ಹಾಗಾಗಿ ರೈತರ ವಿರುದ್ಧ ಯಾವುದೇ ಮೊಕದ್ದಮೆ ದಾಖಲು ಮಾಡಬಾರದು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಯಾರಿಗೂ ಅವಕಾಶವಿಲ್ಲ: ಜಿಲ್ಲಾಧಿಕಾರಿ

“ಜಿಲ್ಲಾಧಿಕಾರಿಗಳಾದ ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವರು, ರೈತರಿಗೆ ಒಳ್ಳೆಯ ಮಾರುಕಟ್ಟೆ ಒದಗಿಸಬೇಕು. ರೈತರ ಕೆಲಸ ದೇಶಕ್ಕೆ ಹಾಗೂ ರಾಜ್ಯಕ್ಕೆ ಕೃಷಿ ಉತ್ಪನ್ನಗಳನ್ನು ಉತ್ಪಾದಿಸಿ ಕೊಡುವುದು, ಬ್ಯಾಡಗಿ ಮೆಣಸಿನಕಾಯಿ ಇಡೀ ಜಗತ್ತಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದು, ಇಡೀ ಜಗತ್ತಲ್ಲಿ ಬ್ಯಾಡಗಿ ಮೆಣಸಿನಕಾಯಿಗೆ ಒಳ್ಳೆಯ ಮಾರ್ಕೆಟ್ ಇದ್ದಮೇಲೆ ಯಾಕೆ ಇಂಥ ಘಟನೆ ಉಂಟಾಯಿತು. ತಾವು ಒಂದು ತಂಡವನ್ನು ರಚನೆ ಮಾಡಿ ಶೀಘ್ರದಲ್ಲೇ ತಪ್ಪಿಸ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಸಿ ಹಾಗೂ ಎಸಿ ರಹಿತ ಗೋಡೌನ್‌ಗಳನ್ನು ಕಟ್ಟಿಸಿಕೊಟ್ಟು ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಶೇಖರಣ ಸೌಲಭ್ಯ ಮಾಡಿದ್ದಲ್ಲಿ ಇಂತಹ ಅನಿರೀಕ್ಷಿತ ಹಾಗೂ ಕಾನೂನು ಬಾಹಿರ ಘಟನೆಗಳನ್ನು ತಡೆಗಟ್ಟಬಹುದು” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...