ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

Date:

Advertisements

ಕನ್ನಡ ಸಾಹಿತ್ಯ ಪರಿಷತ್ತು ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯುವಂತೆ ಮಾಡಲು ನವೀನ ವಿಷಯಗಳನ್ನು ಚರ್ಚೆಗೆ ಒಳಪಡಿಸಬೇಕು. ಯುವ ಜನರ ಪಾಲ್ಗೊಳ್ಳುವಿಕೆಯಿಂದ ಪರಿಷತ್ತು ಇನ್ನೂ ಹೆಚ್ಚು ಜನಮಾನಸವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.

ಹಾವೇರಿ ಪಟ್ಟಣದ ಗೆಳೆಯರ ಬಳಗ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿರೂಪಾಕ್ಷಪ್ಪ ದ್ಯಾಮಣ್ಣನವರ, ದಿ. ಗದಿಗೆಪ್ಪ ಸಿದ್ದಮ್ಮನವರ, ಸಿ.ಸಿ.ಪ್ರಭುಗೌಡರ, ದಿ. ರುದ್ರಪ್ಪ ಕದರಮಂಡಲಗಿ, ಮತ್ತು ದಿ. ಚನ್ನಪ್ಪ ಚೌಶೆಟ್ಟಿ ಇವರ ದತ್ತಿನಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕನ್ನಡ ಸಾಹಿತ್ಯವು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವುದು ಸರ್ವವಿಧಿತ. ಆದರೆ ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆ, ನೆಲ, ಜಲ ವಿಷಯಗಳಲ್ಲಿ ಅನ್ಯಾಯವಾಗುತ್ತಿರುವದು ಸಹ ಖಂಡನೀಯ. ಈ ಹಿನ್ನೆಲೆಯಲ್ಲಿ ಕಸಾಪವು ಹೊಸ ಸ್ಥಿತ್ಯಂತರಗಳನ್ನು ಎದುರಿಬೇಕಾಗಿದೆ. ನಾಡಿನ ಯುವ ಜನತೆ, ಹೊಸ ಪ್ರತಿಭೆಗಳು ಈ ಅನ್ಯಾಯದ ವಿರುದ್ಧ ಎದ್ದು ನಿಲ್ಲಬೇಕಾಗಿದೆ” ಎಂದು ಕರೆ ನೀಡಿದರು.

Advertisements

ದತ್ತಿ ಉಪನ್ಯಾಸ ನೀಡಿದ ಸಾಹಿತಿ ಸಿ.ಎಸ್. ಮರಳಿಹಳ್ಳಿ ಮಾತನಾಡಿ, “ಕನ್ನಡ ಸಾಹಿತ್ಯವು ಪಂಪನ ಕಾಲದಿಂದಲೂ ರಾಜಾಶ್ರಯದಲ್ಲಿ ಬೆಳೆಯಿತು. ಆದರೆ 12ನೇ ಶತಮಾನದ ವಚನ ಸಾಹಿತ್ಯವು ಯಾವದೇ ಆಶ್ರಯವಿಲ್ಲದೇ ಬೆಳೆದು, ಸರ್ವಜನಾಂಗದ ಪ್ರೀತಿಗೆ ಪಾತ್ರವಾಯಿತು. ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯವು ಅತೀ ಶ್ರೇಷ್ಠ ಕೊಡುಗೆ ನೀಡಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ದತ್ತಿದಾನಿಗಳಾದ ವಿರೂಪಾಕ್ಷಪ್ಪ ದ್ಯಾಮಣ್ಣನವರ ಮತ್ತು  ಸಿ.ಸಿ. ಪ್ರಭುಗೌಡರ ಮಾತನಾಡಿದರು. ತಾಲೂಕ ಕಸಾಪ ಅಧ್ಯಕ್ಷ ವಾಯ್.ಬಿ. ಆಲದಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎಂ. ಓಕಾರಣ್ಣನವರ ದತ್ತಿದಾನಿಗಳ ಪರಿಚಯ ಮಾಡಿದರು.  ಕೆ.ಆರ್. ಹಿರೇಮಠ ವಚನಗಳನ್ನು ಪ್ರಸ್ತುತ ಪಡಿಸಿದರು.

ಸಮಾರಂಭದಲ್ಲಿ ಎಸ್.ಜಿ. ಸಿದ್ದಮ್ಮನವರ, ಈರಣ್ಣ ಬೆಳವಡಿ, ಹನುಮಂತಗೌಡ ಗೊಲ್ಲರ, ರೇಣುಕಾ ಗುಡಿಮನಿ  ಹಾಗೂ ಸಾಹಿತ್ಯಸಕ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X