ಹಾವೇರಿ | ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರವೇ ಗಜಸೇನೆ ಒತ್ತಾಯ

Date:

Advertisements

ಹಾವೇರಿ ಜಿಲ್ಲೆಯ ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಬಳಿಕ ಸಾರಿಗೆ ಸಂಸ್ಥೆಯ ಅಧಿಕಾರಿ, ಡಿಪೋ ಮ್ಯಾನೇಜರ್ ಬಿ ಕೆ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಯಲ್ಲಿ ಕರವೇ ಗಜಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ್ ಮಾತನಾಡಿ, “ಪ್ರತಿ ದಿನ ತಡಸದಿಂದ ಹುಬ್ಬಳ್ಳಿಗೆ ಸಂಚರಿಸುವ ಗ್ರಾಮೀಣ ಸಾರಿಗೆ ಬಸ್ಸುಗಳನ್ನು ಸರಿಯಾದ ಸಮಯಕ್ಕೆ ಬಿಡಬೇಕು. ಜೊತೆಗೆ ಈಗಿರುವ ಎರಡು ಬಸ್ಸುಗಳನ್ನು ಕನಿಷ್ಠ 8 ರಿಂದ 10ಕ್ಕೆ ಹೆಚ್ಚಿಸಬೇಕು. ಗ್ರಾಮದ ಬಸ್ ನಿಲ್ದಾಣದಲ್ಲಿ ಆಸನಗಳು ಕಮ್ಮಿ ಇದ್ದು ಹೆಚ್ಚಿಸುವುದರ ಜೊತೆಗೆ ಶೌಚಾಲಯ, ಕಟ್ಟಡಕ್ಕೆ ಸುಣ್ಣ ಬಣ್ಣ ಇಲ್ಲದೆ ಬಿಕೋ ಕಳೆ ಕುದ್ದಿದ್ದು, ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಕರವೇ ಗಜಸೇನೆ ಜಿಲ್ಲಾ ಉಪಾಧ್ಯಕ್ಷ ಯೂಸುಫ್ ಸೈಕಲಗಾರ ಮಾತನಾಡಿ, “ಗ್ರಾಮಕ್ಕೆ ಸಮರ್ಪಕ ಬಸ್ಸಿನ ಸೌಲಭ್ಯ ಇರುವುದಿಲ್ಲ. ಇದರಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತದೆ. ಕೂಡಲೇ ಬಸಗಳನ್ನು ಹೆಚ್ಚಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

Advertisements
ಹಾವೇರಿ 6

ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಂಸ್ಥೆಯ ಅಧಿಕಾರಿ ನಾಗರಾಜ್ ಅವರು ತಮ್ಮೆಲ್ಲಾ ಬೇಡಿಕೆಗಳನ್ನು ಕೇವಲ 8-10 ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕರವೇ ಗಜಸೇನೆಯ ಜಿಲ್ಲಾಧ್ಯಕ್ಷರಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠ, ರಟ್ಟಿಹಳ್ಳಿ ತಾಲೂಕು ಅಧ್ಯಕ್ಷ ರಾಮಚಂದ್ರಪ್ಪ ಹಿಂಡಸಗೇರಿ, ರಟ್ಟಿಹಳ್ಳಿ ತಾಲೂಕು ಯುವ ಘಟಕದ ಅಧ್ಯಕ್ಷ ಖಲಂದರ ಯಲದಳ್ಳಿ, ರಟ್ಟಿಹಳ್ಳಿ ತಾಲೂಕು ಉಪಾಧ್ಯಕ್ಷ ಇಮ್ರಾನ್, ರಟ್ಟಿಹಳ್ಳಿ ತಾಲೂಕು ಸಂಚಾಲಕ ಸನಾವುಲ್ಲಾ, ತಾಲೂಕಾ ಸಹ ಕಾರ್ಯದರ್ಶಿ ಪಾಝಿಲ್ ಪುರದಗೆರಿ, ಸದಸ್ಯರಾದ ರಿಝ್ವಾನ್ ಪುರದಗೇರಿ, ಶಿಗ್ಗಾಂವ್ ತಾಲೂಕು ಅಧ್ಯಕ್ಷ ಶಂಕರ ಬಡಿಗೇರ, ತಡಸ ಗ್ರಾಮ ಘಟಕದ ಅಧ್ಯಕ್ಷ ದಾವಲಸಾಬ ಸಿಕಂದರ, ಶಿಗ್ಗಾಂವ್ ತಾಲೂಕು ಪ್ರಧಾನ ಕಾರ್ಯದರ್ಶಿ ರೇವಣ ಸಿದ್ದಯ್ಯ ಹಿರೇಮಠ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X