ಹಾವೇರಿ | ನದಿ ಜೋಡಣೆಗೆ ಎಲ್ಲ ಜನಪ್ರತಿನಿದಿನಗಳು ಒಟ್ಟುಗೂಡಿ ಒತ್ತಡ ತರೋಣ: ಸಂಸದ ಬಸವರಾಜ ಬೊಮ್ಮಾಯಿ

Date:

Advertisements

“ವರದಾ-ಬೇಡ್ತಿ  ನದಿ ಜೋಡಣೆಗೆ ಎಲ್ಲ ಜನಪ್ರತಿನಿದಿಗಳು ಒಟ್ಟುಗೂಡಿ ನೀರಿಗಾಗಿ ಒತ್ತಡ ತರಬೇಕು.  ಎಲ್ಲರೂ ಒಂದಾಗಬೇಕು. ಈ ವಿಚಾರದಲ್ಲಿ ಯಾರು ವಿರೋಧಗಳಿಲ್ಲ. ಎಲ್ಲರೂ ಸೇರ್ತಾರೆ ಎಂಬ ಭರವಸೆ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೆಲಸಕ್ಕೆ ಮುಂದಾಗೋಣ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ಪಟ್ಟಣದ ಹುಕ್ಕೇರಿ ಮಠದ ಶಿವನುಭವ ಮಂಟಪದಲ್ಲಿ ವರದಾ ಬೇಡ್ತಿ ನದಿ ಜೋಡಣೆ ಕಾಮಗಾರಿ ಸಭೆಯಲ್ಲಿ ಮಾತನಾಡಿದರು.

“ನೀರು ಭಗವಂತ ಕೊಟ್ಟಿರುವ ವರ. ನೀರಿಗೆ ಸಾವಿಲ್ಲ. ನೀರು ಬೇರೆ ಬೇರೆ ರೂಪತಾಳಿ ಮತ್ತೆ ಪರಿಸದಲ್ಲಿಯೇ ಉಳಿಯುತ್ತದೆ. ನೀರು ಬದುಕಿನ ಜಿವಾಳ. ಜೊತೆ ಜೊತೆಗೆ ಆಧುನಿಕತೆ ಬೆಯುತ್ತಿದ್ದು, ನೀರು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ನೀರಿನ ಉಪಯುಕ್ತ ಬಹಳ ಇದೆ. 

Advertisements

ನೀರಿನ ನಿರ್ವಹನೆ ಮುಖ್ಯವಿದೆ. ನೀರಿನ ನಿರ್ವಹನೆಯಿಂದ ನದಿ ನಿರ್ವಹಣೆ ಮಾಡಬಹುದೇ. ನೀರಿನ ಮೂಲ ಬತ್ತಿ ಹೋಗುತ್ತಿದೆ. ನೀರನ್ನು ಅವಲಂಬಿಸಿದ ಪ್ರದೇಶಗಳು ರಾಣೇಬೆನ್ನೂರು, ಗದಗ ಶಿರಹಟ್ಟಿ ಹಾವೇರಿ ಇನ್ನೂ ಅನೇಕ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿವೆ” ಎಂದರು.

“ಪಶ್ಚಿಮದಲ್ಲಿಯೇ ಹುಟ್ಟಿ, ಪಶ್ಚಿಮದಲ್ಲಿ ಸಮುದ್ರಕ್ಕೆ ಸೇರುವ ನದಿಗಳು ನೈಸರ್ಗಿಕವಾಗಿ ಹರಿಯುವ ನದಿಯನ್ನು ನಾವು ಉಪಯೋಗ ಮಾಡಿಕೊಳ್ಳಬೇಕು. ಪರಿಸರ, ನಿಸರ್ಗ, ಅರಣ್ಯ ಉಳಿಸುವದು ಬಹಳ ಮುಖ್ಯವಿದೆ” ಎಂದರು.

“ವರದಾ ಬೇಡ್ತಿ ನದಿ ಜೋಡಣೆ ಬಹಳ ವರ್ಷಗಳಿಂದ ಬೇಡಿಕೆ ಇದೆ. ಸರಕಾರದ ಮಟ್ಟದಲ್ಲಿ ಯೋಜನೆಗಳು ಚರ್ಚೆ ಆದಾಗ ಸ್ವರೂಪ ಪಡೆದುಕೊಳ್ಳುತ್ತವೆ. ಸರಕಾರದ ಮಟ್ಟದಲ್ಲಿ ಚರ್ಚೆ ಆಗುವ ಹಾಗೆ ಮಾಡೋಣ. ಈ ನಡುವೆ ಅಡೆತಡೆಗಳು ಬರುತ್ತವೆ. ಅವುಗಳನ್ನು ದಾಟಿ ಮುಂದೇ ಹೋಗೋಣ. ಎಲ್ಲ ರೈತರು ಸೇರಿ ಯಶಸ್ವಿಗೊಳಿಸೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎ‌ಸ್ಎಫ್ಐ ಒತ್ತಾಯ

ಸಭೆಯಲ್ಲಿ ಸದಾಶಿವ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ರೈತ ಸಂಘ ಮುಖಂಡರು ರಾಮಣ್ಣ ಕೆಂಚಳ್ಳೇರ, ಎ. ಎಸ್. ಬಳ್ಳಾರಿ, ಮಲ್ಲಿಕಾರ್ಜುನ ಬಳ್ಳಾರಿ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X