ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

Date:

Advertisements

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅಕ್ಷಯ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ದಸಂಸ ರಾಜ್ಯ ಸದಸ್ಯ ಉಡಚಪ್ಪ ಮಳಗಿ ಮಾತನಾಡಿ, “ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ 14,15 ನೇ ಹಣಕಾಸು ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಮಾಡಲಾಗಿದ್ದು, ಕುಡಿಯುವ ನೀರು, ಬೊರ್‌ವೆಲ್ ದುರಸ್ತಿ, ವಿದ್ಯುತ್ ಬಿಲ್, ಚರಂಡಿ ದುರಸ್ತಿ ಹಾಗೂ ಸ್ವಚ್ಛತೆ, ಬೀದಿ ದೀಪ, ನೈರ್ಮಲೀಕರಣ, ಹೈ ಮಾಸ್ಟ್‌ ಬೀದಿ ದೀಪ ಸಾಮಗ್ರಿಗಳ ಖರೀದಿ, ಮಿನಿ ವಾಟರ್ ನಿರ್ವಹಣೆ ಕಾಮಗಾರಿಗಳಿಗೆ ಬಳಸಬೇಕಾದ ಹಣದಲ್ಲಿ ಯಾವುದನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಣವನ್ನು ಖರ್ಚು ಹಾಕಿ ಸಾರ್ವಜನಿಕ ಹಣ ದುರುಪಯೋಗ ಪಡೆಸಿಕೊಂಡು ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಈ ವಿಚಾರದಲ್ಲಿ ಜಿಲ್ಲಾ ಪಂಚಾಯತ್ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು; ಕ್ಯಾರೇ ಎನ್ನದ ಅಧಿಕಾರಿಗಳು!

ಮನವಿ ಸಲ್ಲಿಸುವ ಸಂದರ್ಭದಲ್ಲಿ ದಸಂಸ ಮುಖಂಡರಾದ ಮಂಜಪ್ಪ ಮಾರೋಳ, ವೈ. ಎನ್.ಮಾಸೂರ, ಜಗದೀಶ್ ಹರಿಜನ, ಮಂಜುನಾಥ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಶಿವು ಮುದಿಮಲ್ಲಣ್ಣವರ, ಶ್ರೀಮತಿ ರೇಣುಕಾ ಬಡಕಣ್ಣವರ, ಬಸವಣ್ಣಪ್ಪ ಅರಳಿಹಳ್ಳಿ,ಶಂಭುಲಿಂಗಪ್ಪ ದಿವಟರ,ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ,ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ,ರತ್ನವ್ವ ದೊಡ್ಡಮನಿ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X