ಹಾವೇರಿ | ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಮೋದಿ ಸರ್ಕಾರ ರದ್ದುಪಡಿಸಬೇಕು: ಬಸವರಾಜ ಪೂಜಾರ

Date:

Advertisements

“ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಮಾಸಿಕ ಮೂವತ್ತಾರು ಸಾವಿರ ರೂಪಾಯಿ ಕನಿಷ್ಠ ವೇತನ ಜಾರಿಗೊಳಿಸಬೇಕು” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹಾವೇರಿ ಪಟ್ಟಣದಲ್ಲಿ ದೇಶವ್ಯಾಪಿ ಕಾರ್ಮಿಕರ ಮುಷ್ಕರದ ಭಾಗವಾಗಿ ಇಂದು ಸಿದ್ದಪ್ಪ ಹೊಸಮನಿ ವೃತ್ತದ ಬಳಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಈ ಹಿಂದೆ ಕಾರ್ಮಿಕರ ಬದುಕಿಗೆ ಒಂದಷ್ಟು ಅನುಕೂಲಕರವಾಗಿದ್ದ 29 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನಾಗಿ ಅಂಗೀಕರಿಸುವ ಮೂಲಕ ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಈ ನಾಲ್ಕು ಕಾರ್ಮಿಕ ಸಂಹಿತೆಗಳು ದೇಶದ ಕಾರ್ಮಿಕರ ರಕ್ಷಣಾತ್ಮಕ ಅಂಶಗಳು, ಜೀವಿಸುವ ಹಕ್ಕು, ಮೂಲಭೂತ ಹಕ್ಕುಗಳು, ವೇತನ ಕುರಿತ ವ್ಯಾಖ್ಯಾನ, ಪ್ರತಿಭಟನೆ ಹಕ್ಕು, ಸಾಮಾಜಿಕ ಭದ್ರತೆ, ಮಾಲೀಕ-ಕಾರ್ಮಿಕ ಸಂಬಂಧ, ವೇತನ ಚೌಕಾಶಿ, ಆರೋಗ್ಯ ಮತ್ತು ಸುರಕ್ಷತೆ ನಿಯಮಗಳನ್ನು ಮೊಟಕುಗೊಳಿಸಲಿವೆ. ಕಲ್ಯಾಣ ರಾಜ್ಯದ ಪರಿಕಲ್ಪನೆಗಳನ್ನು ದುರ್ಬಲಗೊಳಿಸಲಿವೆ. ಕಾರ್ಪೋರೇಟ್ ಗಳಿಗೆ ಕಡಿವಾಣವಿಲ್ಲದ ಲಾಭವನ್ನು ಗಳಿಸಲು ರಹದಾರಿ ನಿರ್ಮಿಸಿ, ಕಾರ್ಮಿಕರ ಪಾಲಿಗೆ ಮರಣಶಾಸನಗಳಾಗುತ್ತವೆ” ಎಂದರು.

“ಕೇಂದ್ರ ಸರಕಾರ ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತ್ರಿಪಡಿಸುವ ಶಾಸನ ರೂಪಿಸಬೇಕು. ರಾಜ್ಯದಲ್ಲಿ  ಬಜೆಪಿ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ, ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೇಸ್ ಸರಕಾರ ಈವರೆಗೂ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆಯದೇ ಅನ್ಯಾಯವೆಸಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಈ ಕೃಷಿ ಕಾಯಿದೆಗಳನ್ನು ವಾಪಾಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

WhatsApp Image 2025 07 09 at 5.35.28 PM

“ಸಿಐಟಿಯು ಜಿಲ್ಲಾ ಸಂಚಾಲಕ ಅಂದಾನೆಪ್ಪ ಹೆಬಸೂರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಹಾಸ್ಟೇಲ್, ವಸತಿ ಶಾಲೆ, ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬ್ಯಾಂಕ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ ಮುಂತಾದ ಖಾಯಂತೇತರ ನೌಕರರು, ಸ್ವಚ್ಛವಾಹಿನಿ ನೌಕರರು, ಸ್ಕೀಂ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರನ್ನು ಖಾಯಂಗೊಳಿಸಲು ಶಾಸನ ರೂಪಿಸಬೇಕು. ಹಮಾಲಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ವಿಮೆ, ಪಿಂಚಣಿ, ಮನೆ/ನಿವೇಶನ ಸೌಲಭ್ಯ ಖಾತ್ರಿ ಪಡಿಸಬೇಕು” ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯತಿ ನೌಕರರ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಜಗದೀಶ ಕೋಟಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಯೇತರರ ನೌಕರರ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಚೈತ್ರಾ ಎಸ್.ಕೆ, ಅಖಿಲ ಭಾರತ ಬ್ಯಾಂಕ್ ನೌಕರರ ಅಸೋಶಿಯೇಶನ್ ಜಿಲ್ಲಾ ಮುಖಂಡ ಪ್ರಕಾಶ ದೇವರಗುಡ್ಡ, ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾಧ್ಯಕ್ಷೆ ಶಾಂತಾ ವೀ ಗಡ್ಡಿ, ಹಿರಿಯ ಹೋರಾಟಗಾರ ರುದ್ರಪ್ಪ ಜಾಬೀನ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆ ಮುಖಂಡ ಹಬೀಬ್ ಮುಲ್ಲಾ ಮಾತನಾಡಿದರು.

ಮನವಿ ಕಾರ್ಮಿಕರು, ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಹಾವೇರಿಯ ಉಪ ತಹಶೀಲ್ದಾರ ಎಸ್.ಎಚ್ ಏರಿಮನಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನಾ ಮೆರವಣಿಗೆಯು ಸುರಿಯುವ ಮಳೆಯಲ್ಲಿಯೇ ನಗರದ ಮುರುಘರಾಜೇಂದ್ರ ಮಠದಿಂದ ಆರಂಭಗೊಂಡು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ, ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಹಾವೇರಿ | ಮಕ್ಕಳಿಗೆ ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ

ಪ್ರತಿಭಟನೆಯಯಲ್ಲಿ ವಿವಿಧ ಸಂಘಟನೆಗಳ ಜಿಲ್ಲಾ ಮುಖಂಡರಾದ ನಾರಾಯಣ ಕಾಳೆ, ಸುಭಾಸ್ ಸೊಟ್ಟೆಪ್ಪನವರ, ಚನವೀರಯ್ಯ ಹಿರೇಮಠ, ರಿಯಾಜ್ ಅಹ್ಮದ್ ಮರಪಾಜೆ, ಹುಸೇನಸಾಬ್ ಏರಿಮನಿ, ಈರಪ್ಪ ವಡ್ಡರ, ರಿಯಾಸ್ ಕೋಟೆನವರ, ಸಾಬೀರ ಕಡಕೋಳ, ಹನುಮಂತಪ್ಪ ಗೊರವರ, ಗುಡ್ಡಪ್ಪ ಗಾಜಿ, ಫಕ್ಕಿರೇಶ ಹಕ್ಕಿಮರೆಣ್ಣನವರ, ರೇಣುಕಮ್ಮ ಕಸವಾಡ, ನಾಗಮ್ಮ ಒಣರೊಟ್ಟಿ, ಮಂಜುಳಾ ಹಾನಗಲ್, ಮಂಜುಳಾ ತಡಸ ಜಯಮ್ಮ ಬೆಳವಿಗಿ, ದೀಪಾ ಛಲವಾದಿ, ಜ್ಯೋತಿ ಮಾಸೂರು, ನೇತ್ರಾ ಹರಿಜನ, ಲಕ್ಷ್ಮೀ ತಳವಾರ, ಆದಂ ದೇವಿಹೊಸೂರು, ಜಾಫರಸಾಬ ಮನ್ನಂಗಿ, ಎಚ್.ಎಚ್. ನದಾಫ, ಶಿವರಾಜ ಹಿತ್ಲರ್, ಸುನೀಲಕುಮಾರ್ ಎಲ್, ಅರುಣ ನಾಗವಂದ, ಸುನೀತಾ ಬಾಡನಾಯ್ಕ, ಶೋಭಾ ಡೊಳ್ಳೆಶ್ವರ, ಆರ್ ಶ್ರೀಕೃಷ್ಣ ಚೈತನ್ಯ, ಸಿ ರಾಜಶೇಖರ್, ಲಲಿತಾ ಹರಿಜನ, ಪವಿತ್ರಾ ಮಾಳಗಿ ವಹಿಸಿದ್ದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳಿಂದ ಎರಡುನೂರಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X