ಹಾವೇರಿ | ಪಹಲ್ಗಾಮ್ ದಾಳಿ; ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಡಿವೈಎಫ್ಐ-ಎಸ್ಎಫ್ಐ

Date:

Advertisements

ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹಾವೇರಿ ಪಟ್ಟಣದ ಜಿ ಎಚ್ ಕಾಲೇಜು ಎದುರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಸಂಘಟನೆಗಳು ಒಗ್ಗೂಡಿ ಭಯೋತ್ಪಾದನೆ ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

“ನಮ್ಮ ರಾಜ್ಯದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯ ತೀವ್ರ ಖಂಡನೀಯ. ಇದರ ವಿರುದ್ಧ ಎಲ್ಲ ಜನತೆಯೂ ಐಕ್ಯತೆಯಿಂದ ಪ್ರತಿರೋಧಿಸಬೇಕು” ಎಂದರು.

Advertisements

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ-ಎಸ್ಎಫ್ಐ ಸಂತಾಪಗಳನ್ನು ಸಲ್ಲಿಸುತ್ತವೆ. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ‌ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಕಟ್ಟುನಿಟ್ಟಿನ ಕ್ರಮವನ್ನು ಕೇಂದ್ರ ಸರ್ಕಾರ ಖಾತ್ರಿಪಡಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.

“ರಾಷ್ಟ್ರಕ್ಕೆ ಭದ್ರತೆ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆಯೆಂದು ಹೇಳುತ್ತಲೇ ಇದೆ. ಆದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಆದ್ದರಿಂದ ಕೇಂದ್ರ ಸರ್ಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು”‌ ಎಂದು ಒತ್ತಾಯಿಸಿದರು.

“ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದುಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ”‌ ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ದುರುಗಪ್ಪ ಯಮ್ಮಿಯವರ ಮಾತನಾಡಿ, “ಭಯೋತ್ಪಾದನೆಗೆ ಅಥವಾ ಅಂತಹ ಅಪರಾಧಗಳಿಗೆ ಸಹಕರಿಸುವ ಮತ್ತು ಸಹಾಯ ಮಾಡುವ ಶಕ್ತಿಗಳಿಗೆ ಸಹಿಷ್ಣುತೆ ಇರಲು ಸಾಧ್ಯವಿಲ್ಲ. ಜನರು ಮತ್ತು ಸಮುದಾಯಗಳಲ್ಲಿ ವಿಭಾಗಗಳನ್ನು ಸೃಷ್ಟಿಸಲು ಈ ದುರಂತವನ್ನು ಬಳಸಿಕೊಳ್ಳಲು ಕೋಮು ಅಥವಾ ಮೂಲಭೂತವಾದಿ ಅಂಶಗಳ ಯಾವುದೇ ಪ್ರಯತ್ನಗಳು ಖಂಡನೀಯ” ಎಂದರು.

“ಈ ನಿರ್ಣಾಯಕ ಕ್ಷಣದಲ್ಲಿ, ನಾವು ಭಾರತದ ಜನತೆ ಒಗ್ಗಟ್ಟಾಗಿರುವಂತೆ ಡಿವೈಎಫ್ಐ-ಎಸ್ಎಫ್ಐ ಕರೆ ನೀಡುತ್ತವೆ. ಭಯೋತ್ಪಾದನೆ ನಮ್ಮ ಸಮಾಜವನ್ನು ವಿಂಗಡಿಸಲು ಪ್ರಯತ್ನಿಸುತ್ತದೆ. ಆದರೆ ನಾವು ನಮ್ಮ ಒಗ್ಗಟ್ಟು, ಸಾಮರಸ್ಯ ಮತ್ತು ಬದ್ಧತೆಯಿಂದ ಪ್ರತಿಕ್ರಿಯಿಸುವ ಜತೆಯಲ್ಲಿ ನಮ್ಮ ದೇಶದ ಜಾತ್ಯತೀತ ಬುನಾದಿ ಬಲಪಡಿಸಲು ಮತ್ತು ಶಾಂತಿ, ನ್ಯಾಯ ಹಾಗೂ ಸಹಬಾಳ್ವೆಯ ತತ್ವಗಳನ್ನು ರಕ್ಷಿಸಲು ನಾವು ಒಟ್ಟಿಗೆ ಸಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಶ್ರದ್ಧಾಂಜಲಿ: ಪ್ರತಿಭಟನೆಯ ಆರಂಭದಲ್ಲಿ ವಿದ್ಯಾರ್ಥಿಗಳು, ಭಯೋತ್ಪಾದನೆಯಲ್ಲಿ ಮಡಿದವರಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಿದರು. ಭಯೋತ್ಪಾದಕರ ದುಷ್ಕೃತ್ಯವನ್ನು ಖಂಡಿಸಿ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಗದಿಗೆಯ್ಯ ಅರಾಧ್ಯಮಠ, ನಿರಂಜನ ಕುಲಕರ್ಣಿ, ಲಿಂಗರಾಜ ಬಣಕಾರ, ಮಾಲತೇಶ ಕರೆಣ್ಣನವರ, ಮಲ್ಲಪ್ಪ ಪೂಜಾರ, ಕುಮಾರ, ಅನು ಕವಲಿ, ಅನಿತಾ ದೇಸಾಯಿ, ಗಂಗಾ ಯಲ್ಲಾಪೂರ, ಗಾಯತ್ರಿ ಹೊಂಬಳಿ, ಮೋನಿಕಾ ಬಸೆಗಣ್ಣಿ, ಧನ್ಯಶ್ರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X