ಹಾವೇರಿ | ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರ ಜಯಭೇರಿ

Date:

Advertisements

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಯ ಒಟ್ಟು 14 ಸ್ಥಾನಗಳ ಪೈಕಿ ಎರಡಕ್ಕೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಗುಡಗೂರ ಹಾಗೂ ಗುಡ್ಡಗುಡ್ಡಾಪುರ ಕ್ಷೇತ್ರಗಳ ಫಲಿತಾಂಶ ಹೊರತುಪಡಿಸಿ (ನ್ಯಾಯಾಲಯದ ಆದೇಶದ ಪ್ರಕಾರ) ಉಳಿದ ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲಾಯಿತು.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು: ರತ್ನವ್ವ ರಾಜಶೇಖರಗೌಡ ಗಂಗನಗೌಡ್ರ (ಮುದೇನೂರು ಕ್ಷೇತ್ರ), ಮಹೇಶ ಕುಬೇರಪ್ಪ ಕಂಬಳಿ (ರಾಣಿಬೆನ್ನೂರು ಕ್ಷೇತ್ರ), ಕುಮಾರ ಸಹದೇವಪ್ಪ ಬತ್ತಿಕೊಪ್ಪದ (ಬಿಲ್ಲಹಳ್ಳಿ ಕ್ಷೇತ್ರ), ಕರೇಗೌಡ ಶಿವಪ್ಪ ಬಾಗೂರ (ಕುಪ್ಪೇಲೂರ ಕ್ಷೇತ್ರ), ವೀರನಗೌಡ ಪುಟ್ಟನಗೌಡ ಪೊಲೀಸಗೌಡ್ರ (ಜೋಯಿಸರಹರಹಳ್ಳಿ ಕ್ಷೇತ್ರ), ಉದಯಕುಮಾರ ಶಿವಪ್ಪ ಕನ್ನಪ್ಪಳ್ಳನವರ (ಹಲಗೇರಿ ಕ್ಷೇತ್ರ), ಶಿವಲೀಲಾ ರಾಜಶೇಖರಯ್ಯ ಸುರಳಿಕೇರಿಮಠ (ರಾಣಿಬೆನ್ನೂರು ಕ್ಷೇತ್ರ) ಹಾಗೂ ಹಾಲಪ್ಪ ಭೀಮಪ್ಪ ಲಮಾಣಿ (ಹೊನ್ನತ್ತಿ ಕ್ಷೇತ್ರ) ಅವಿರೋಧ ಆಯ್ಕೆ

Advertisements

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು: ಮಹದೇವಕ್ಕ ಅಶೋಕ ಓಲೇಕಾರ (ಮೇಡೇರಿ ಕ್ಷೇತ್ರ), ಕಲ್ಪನಾ ಬಸನಗೌಡ ಪಾಟೀಲ (ಇಟಗಿ ಕ್ಷೇತ್ರ), ಬಸವರಾಜ ತಿರಕಪ್ಪ ತೆಂಬದ (ಕರೂರ ಕ್ಷೇತ್ರ) ಹಾಗೂ ರಮೇಶ ವಿರುಪಾಕ್ಷಪ್ಪ ಕೆರೂಡಿ (ಕಾಕೋಳ ಕ್ಷೇತ್ರ) ಅವಿರೋಧ ಆಯ್ಕೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕರ ವಿಕ್ರಮ ಕುಲಕರ್ಣಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಅಭ್ಯರ್ಥಿಗಳನ್ನು ವಿಧಾನ ಸಭೆ ಮಾಜಿ ಸ್ಪೀಕರ್‌ಕೆ.ಬಿ. ಕೋಳಿವಾಡ ಸನ್ಮಾನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X