ಹಾವೇರಿ | ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ. ರಚನೆ: ಡಿವೈಎಫ್ಐ ಸ್ವಾಗತ

Date:

Advertisements

“ಪ್ರಾರಂಭಿದ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸುತ್ತದೆ” ಎಂದು ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದ್ದಾರೆ.

ಹಾವೇರಿ ಪಟ್ಟಣದ ಪತ್ರಿಕಾ ಹೇಳಿಕೆ ನೀಡಿದ ಅವರು, “80ರ ದಶಕದಲ್ಲಿ ನಡೆದ ಪದ್ಮಲತಾ ಪ್ರಕರಣದ ಸಂದರ್ಭದಿಂದಲೇ ಡಿವೈಎಫ್ಐ ಅಲ್ಲಿನ ವಿದ್ಯಮಾನಗಳಿಗೆ ವಿರೋಧ ವ್ಯಕ್ತಪಡಿಸಿದೆ. ಹಲವು ಹಂತಗಳಲ್ಲಿ ನಡೆದ ಹೋರಾಟಗಳಲ್ಲಿ ಪಾಲ್ಗೊಂಡಿದೆ. ಆ ಹೋರಾಟಗಳ ನಂತರವಷ್ಟೇ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು. ಹಲವು ವರ್ಷಗಳ ಹಿಂದೆ ಪ್ರಕರಣಗಳು ನಡೆದು ಉದ್ದೇಶಪೂರ್ವಕವಾಗಿ ಸಾಕ್ಷಿನಾಶ ಮಾಡಲಾಗಿದೆ ಎಂದೂ ಕುಖ್ಯಾತವಾಗಿದ್ದ ಪ್ರಕರಣಗಳು ಇರುವುದರಿಂದ ಕೂಲಂಕುಷವಾದ ತನಿಖೆ ನಡೆಯಬೇಕಿದೆ” ಎಂದು ಹೇಳಿದರು.

“ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಪ್ರಾರಂಭದ ದಿನಗಳಿಂದ ಪ್ರಕರಣಗಳ ಬೆನ್ನು ಹತ್ತಿ ಹೋರಾಟ ಪ್ರತಿಭಟನೆ ಗಳನ್ನು ಮಾಡಿದ ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಸ್.ಐ.ಟಿ ಯು ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದರು.

Advertisements

“ಕಾಲ ವಿಳಂಬ ಮಾಡದೇ ನಿರ್ದಿಷ್ಟ ಕಾಲಮಿತಿಯಲ್ಲಿ ತನಿಖೆ ನಡೆದು ಸತ್ಯವನ್ನು ಹೊರಗೆಳೆಯಬೇಕು. ಸಿ.ಬಿ.ಐ.ನ್ಯಾಯಾಲಯದ ತೀರ್ಪು ಸೂಚಿಸಿರುವಂತೆ ಸೌಜನ್ಯ ಪ್ರಕರಣದಲ್ಲಿ ಪ್ರಾಥಮಿಕ ಹಂತದಲ್ಲಿ ತನಿಖೆಯ ದಾರಿ ತಪ್ಪಿಸಲು, ಸಾಕ್ಷಿ ನಾಶ ಮಾಡಿದ ತನಿಖಾಧಿಕಾರಿಗಳನ್ನು ತೀವ್ರ ತನಿಖೆಗೆ ಒಳಪಡಿಸಿ, ಆರೋಪಿಗಳನ್ನು ಶಿಕ್ಷಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X