ಹಾವೇರಿ | ವಿ ವಿ ಉಳಿಸಲು ರಾಜ್ಯದ ರೈತ ಸಂಘಟನೆಗಳು ಬೆಂಬಲಿಸಿ: ಉಡಚಪ್ಪ ಮಾಳಗಿ

Date:

Advertisements

“ಕಳೆದ ಎರಡು ವರ್ಷಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಪ್ರಾರಂಭಿಸಿದ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ 9 ವಿ.ವಿ ಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟ ಉಪ ಸಮಿತಿಯು ತೀರ್ಮಾನಕ್ಕೆ ಮುಂದಾಗಿರುವುದು ಆತಂಕವನ್ನುಂಟು ಮಾಡಿದೆ.ರಾಜ್ಯ ಸರಕಾರದ ಈ ನಡೆಯಿಂದಾಗಿ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ವಿ ವಿ ಉಳಿಸಲು ರಾಜ್ಯದ ಎಲ್ಲಾ ರೈತ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲಿಸಿ” ಎಂದು ಹಾವೇರಿ ವಿವಿ ರಕ್ಷಣಾ ಹೋರಾಟ ಸಮಿತಿ ಮುಖಂಡ ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನವನ್ನು ರಾಜ್ಯ ಸರಕಾರ ಹಿಂಪಡೆಯಲು ಹಾಗೂ ಮುಂಬರುವ ಬಜೆಟ್ ನಲ್ಲಿ ವಿ.ವಿ ಗೆ ಅಗತ್ಯ ಅನುದಾನ ಒದಗಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಲು ರಾಜ್ಯ ರೈತ ಸಂಘಟನೆಗಳು ಬೆಂಬಲ ಸೂಚಿಸಿ ಸರ್ಕಾರಕ್ಕೆ ಒತ್ತಡ ಹೇರುವಂತೆ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಸರಕಾರ ಮುಚ್ಚಲು ಹೊರಟಿರುವ ಈ ವಿ.ವಿ ಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು, ಬೋದಕೇತರ ಸಿಬ್ಬಂದಿ ನೇಮಕ.ಗ್ರಾಂಥಾಲಯ, ಪ್ರಯೋಗಾಲಯ, ಹಾಸ್ಟೇಲ್, ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು. ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಹಾವೇರಿ ವಿ.ವಿ ಯು ಮುನ್ನಡೆಯುತ್ತಿದೆ” ಎಂದರು.

Advertisements

ಹಾವೇರಿ ವಿವಿ ರಕ್ಷಣಾ ಹೋರಾಟ ಸಮಿತಿ ಸಂಚಾಲಕ ಬಸವರಾಜ ಪೂಜಾರ್ ಮಾತನಾಡಿ, “ಸರಕಾರದಿಂದ ಅನುದಾನವಿರದ ಪರಿಸ್ಥಿತಿಯಲ್ಲಿಯೂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯವನ್ನು ಮುಚ್ಚಲು ರಾಜ್ಯ ಸರಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಒಪ್ಪಲಾಗದು. ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ ವಿ. ವಿ ಯನ್ನು ಉಳಿಸಿ, ಬೆಳೆಸಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದ್ವಿತೀಯ ಪಿಯು ಪರೀಕ್ಷೆ : 794 ವಿದ್ಯಾರ್ಥಿಗಳು ಗೈರು

ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಎಂ ಗೋಪಿನಾಥ, ಡಾ.ಎನ್ ಮೂರ್ತಿ, ಅಶೋಕ ಮರೆಣ್ಣನವರ,ಮಹಾದೇವಪ್ಪ ಮಾಳಮ್ಮನವರ, ಹನಮಂತಪ್ಪ ಕಬ್ಬಾರ, ಎಂ ಕೆ ಮಖಬೂಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X