ಹಾವೇರಿ | ಹಾವೇರಿ ವಿವಿ ಉಳಿಸಲು ಹೋರಾಟ ಸಮಿತಿ ರಚನೆ

Date:

Advertisements

ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಅಭಿಯಾನ ಆರಂಭಿಸಲಾಗಿದೆ. ಹೋರಾಟವನ್ನು ಚುರುಕುಗೊಳಿಸಲು ಮತ್ತಷ್ಟು ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ರಚಿಸಲಾಗಿದೆ.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲ ನಗರದ ಶುಕ್ರವಾರ ಹಮ್ಮಿಕೊಂಡಿದ್ದ ಹೋರಾಟದ ಚರ್ಚಾ ಸಭೆಯಲ್ಲಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡರು. ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದರು.

ಜಿಲ್ಲೆಗೆ ಹಾವೇರಿ ವಿಶ್ವವಿದ್ಯಾಲಯ ಬೇಕು. ಇದನ್ನು ಮುಚ್ಚಲು ಬಿಡುವುದಿಲ್ಲ. ಮುಚ್ಚುವ ನಿರ್ಧಾರವನ್ನು ಖಂಡಿಸಿ ಹಾವೇರಿ ಜಿಲ್ಲೆಯ ಆರು ಶಾಸಕರಿಗೆ ಸಾಧ್ಯದಲ್ಲಿಯೇ ಮನವಿ ಸಲ್ಲಿಸಲಾಗುವುದು. ಹಾವೇರಿ ವಿವಿ ಉಳಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಒತ್ತಾಯಿಸಲಾಗುವುದು’ ಎಂದು ಸಮಿತಿ ಸದಸ್ಯರು ಹೇಳಿದರು.

Advertisements

ಈ ಬಾರಿಯ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಕ್ಕೆ ನೀಡಬೇಕು ಅನುದಾನ ಎಂದೂ ಆಗ್ರಹಿಸಲಾಗುವುದು. ಸಂಸದ, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಆಡಳಿತ ಸಂಸ್ಥೆಗಳ ಅಧ್ಯಕ್ಷೆರಿಗೂ ಮನವಿ ಸಲ್ಲಿಸಲಾಗುವುದು’ ಎಂದರು.

‘ಮನವಿ ಸಲ್ಲಿಕೆ ಬಳಿಕ, ಶಾಸಕರ ಅಭಿಪ್ರಾಯ ಪಡೆಯಲಾಗುವುದು. ನಂತರವೇ, ಹೋರಾಟವನ್ನು ಮತ್ತಷ್ಟು ಗಂಭೀರಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

ಸಭೆಯಲ್ಲಿ ಬಸವರಾಜ್ ಪೂಜಾರ್, ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಏಳುಕೋಟೆಪ್ಪ ಪಾಟೀಲ್, ಪರಿಮಳ ಜೈನ್, ಉಡಚಪ್ಪ ಮಳಗಿ, ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ್ ಎಸ್ ಇನ್ನೂ ಅನೇಕರು ಪ್ರಗತಿಪರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X