ಹಾವೇರಿ | ಯುವಜನರಿಗೆ ಪರಿಸರ ಸಂರಕ್ಷಣೆ ಕುರಿತು ಪ್ರವಾಸ ಅಧ್ಯಯನ

Date:

Advertisements

“ಯುವಜನರು ದೇಶದ ಭವಿಷ್ಯ, ನವ ಸಮಾಜವನ್ನು ಕಟ್ಟುವವರು. ಶಕ್ತಿಯುಳ್ಳ ಉತ್ಸಾಹಪೂರ್ಣ ಹಾಗೂ ಹೊಸ ಚಿಂತನೆಗಳನ್ನು ಹೊಂದಿರುವ ಸಮೂಹವಾಗಿದ್ದು, ಪರಿಸರ ಸಂರಕ್ಷಣೆಯ ಮಹತ್ವದ ಕಾರ್ಯದಲ್ಲಿ ಅವರ ಪಾತ್ರ ಬಹಳ ಮುಖ್ಯ” ಎಂದು ನಿರ್ದೇಶಕರು ಲೊಯೋಲ ವಿಕಾಸ ಕೇಂದ್ರದ ನಿರ್ದೇಶಕರು ಫಾದರ್ ವಿನೇಂಟ್ ಜೇಸನ್ ಪ್ರಾಸ್ತಾವಿಕ ಮಾತನಾಡಿರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದ ವತಿಯಿಂದ ಯುವಜನರಿಗೆ ಒಂದು ದಿನದ ಪ್ರವಾಸ ಅಧ್ಯಯನವನ್ನು ಮಲೆನಾಡು ಪ್ರದೇಶವಾದ ಯಾಣದ ಕಡೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ” ಪರಿಸರ ಸಂರಕ್ಷಣೆ ಅಂದರೆ ಬರಿ ಒಂದು ದಿನದ ಕಾರ್ಯಕ್ರಮ ಅಲ್ಲ. ಅದು ನಾವು ಭೂಮಿಯ ಮೇಲೆ ಇರುವವರೆಗೂ ಹಲವಾರು ರೀತಿಯ ಮಾಲಿನ್ಯಗಳಿಂದ ಪರಿಸರವನ್ನು ಸಂರಕ್ಷಣೆ ಮಾಡುವುದಾಗಿದೆ. ನಮ್ಮ ದಿನ ನಿತ್ಯದ ಪ್ರತಿಯೊಂದು ಚಟುವಟಿಕೆಗಳು ಪರಿಸರ ಸ್ನೇಹಿಯಾಗಿರಬೇಕು. ಪರಿಸರವನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವುದು ನಮ್ಮೇಲ್ಲರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಯಾಣದ ಕಡೆ ಯುವಜನರಿಗೆ ಪವಾಸ ಅಧ್ಯಯನವನ್ನು ಕೈಗೊಂಡು ಅಲ್ಲಿನ ಮರಗಿಡಗಳು, ದಟ್ಟವಾದ ಅರಣ್ಯ, ಕಾಡುಗಳ ಮದ್ಯ ಪಶಾಂತವಾಗಿ ಹರಿಯುವ ನೀರಿನ ಮೂಲಗಳು, ಮಣ್ಣಿನ ವಿಧಗಳ ಬಗ್ಗೆ ಯುವಜನರು ಅರಿತುಕೊಂಡರು. ಪ್ರವಾಸ ಅಧ್ಯಯನದಲ್ಲಿ ಒಟ್ಟು 60 ಯುವಜನರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X