ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

Date:

Advertisements

“ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ ಹೋರಾಟದ ಫಲವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಮೀಸಲಾತಿ ಹಂಚಿಕೆ ಮಾಡಿರುವುದು ಹೆಮ್ಮೆಯ ವಿಷಯ. ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ” ಎಂದು ದಲಿತ ಹೋರಾಟಗಾರ ಉಡಚಪ್ಪ ಮಾಳಗಿ ಅಭಿನಂದಿಸಿದರು.

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿಯ ಹಂಚಿಕೆ ಮಾಡಲು ಸಹಕಾರಿಯಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ರಾಜ್ಯ ಸರ್ಕಾರದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ, ಶಾಸಕರಿಗೆ, ಒಳಮೀಸಲಾತಿಗೆ ಸಹಕಾರ ನೀಡಿದ ಎಲ್ಲಾ ವಕೀಲರಿಗೆ, ಮುಖಂಡರಿಗೆ ಸಮುದಾಯದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

“35 ವರ್ಷಗಳ ಕಾಲ ಒಳಮೀಸಲಾತಿಗಾಗಿ ಅನೇಕ ಧರಣಿ, ಹೋರಾಟ, ಪ್ರತಿಭಟನೆ, ಸತ್ಯಗ್ರಹ, ಪಾದಯಾತ್ರೆ, ಉಪವಾಸ ಸತ್ಯಗ್ರಹ, ಅರೆಬೆತ್ತಲೆ ಮೆರವಣೆಗೆ ಸೇರಿದಂತೆ ವಿವಿಧ ವಿಭಿನ್ನ ಹೋರಾಟವನ್ನು ಮಾಡುತ್ತಾ ಬರಲಾಗಿತ್ತು. ಸಾಮಾಜಿಕ ನ್ಯಾಯದಡಿ ಶೋಷಿತರಿಗೆ ನ್ಯಾಯ ಒದಗಿಸಬೇಕೆಂದು ರಾಜ್ಯದಲ್ಲಿ ಆಳ್ವಿಕೆ ಬರುವ ಎಲ್ಲಾ ಸರ್ಕಾರ ಬಂದಾಗಲೂ ನಿರಂತರವಾಗಿ ಹೋರಾಟ ಮಾಡಲಾಗಿತ್ತು. ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಅಗಷ್ಟ್-01-2024 ರಂದು ಸುಪ್ರೀಂ ಕೋರ್ಟ ಪೂರಕವಾಗಿರುವ ತೀರ್ಪು ನೀಡಿ ಒಳಮೀಸಲಾತಿಗೆ ಸಹಕಾರಿಯಾಯಿತು” ಎಂದರು.

Advertisements

“ಒಳಮೀಸಲಾತಿ ಜಾರಿಗೆ ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ರಾಜ್ಯದ ಮಠಾಧೀಶರಿಗೆ, ನೌಕರ ವರ್ಗದವರಿಗೆ, ಪತ್ರಿಕೆ ಮತ್ತು ಎಲ್ಲಾ ಮಾಧ್ಯಮ ಬಳಗದವರಿಗೆ ಹಾಗೂ ಸಾರ್ವಜನಿಕರಿಗೆ ಕೃತಜ್ಷತೆಯನ್ನು ಸಲ್ಲಿಸುತ್ತೇವೆ. ರಾಜ್ಯದಲ್ಲಿನ ಎಲ್ಲಾ ಒಳಮೀಸಲಾತಿ ಹೋರಾಟಗಾರರಿಗೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ, ಜಿಲ್ಲೆ,ತಾಲ್ಲೂಕ ಹಾಗೂ ಗ್ರಾಮ ಸಂಘಟನೆಗಳಿಗೆ” ಅಭಿನಂದನೆಗಳನ್ನು ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X