ಹಾವೇರಿ | ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ: ತಪ್ಪಿತಸ್ತರಿಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ

Date:

Advertisements

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿ ಮಗುವಿಗೆ ಮಾನಸಿಕ ಕಿರುಕುಳ ನೀಡಿದ್ದು ಖಂಡನೀಯ. ಕೂಡಲೇ ತಪ್ಪಿತಸ್ತರಿಗೆ ಕಾನೂನು ಕ್ರಮ ಜರುಗಿಸಬೇಕು” ಎಂದು ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಫಕಿರೇಶ ಎಚ್ ಬಣಕಾರ ಆಗ್ರಹಿಸಿದರು.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ದೇವಿಹೊಸೂರು ಗ್ರಾಮದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿರುವುದನ್ನು ಖಂಡಿಸಿ ಡಾ|| ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಅಸ್ಪೃಶ್ಯತೆ ಆಚರಣೆ ಮಾಡಿ, ಶಾಲಾ ವ್ಯವಸ್ಥೆಯಲ್ಲಿ ಕಾನೂನು ಉಲ್ಲಂಘನೆ ಮಾಡಿದ ಅತಿಥಿ ಶಿಕ್ಷಕಿ ಮತ್ತು ಈ ಅಸ್ಪಶ್ಯತೆ ಆಚರಣೆಯನ್ನು  ಮಾಡುವುದು ಗೊತ್ತಿದ್ದರೂ ಕ್ರಮ ಕೈಗೊಳ್ಳದ ಶಾಲೆಯ ಮುಖ್ಯ ಶಿಕ್ಷಕ  ಉಳಿದ ಸಹ ಶಿಕ್ಷಕರು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣ ಆ ಶಾಲೆಯ ಅತಿಥಿ ಶಿಕ್ಷಕಿ ಮತ್ತು ಆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಇತರ ಶಿಕ್ಷಕರ ವಿರುದ್ದ ಎಪ್.ಐ.ಆರ್ ದಾಖಲು ಮಾಡಿ ಅವರ ವಿರುದ್ದ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪಕೀರೇಶ ಬಣಕಾರ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಬಂಕಾಪುರ ಕೇಂದ್ರ ಬಸ್ಸ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಗಜಸೇನೆ ಆಗ್ರಹ

Advertisements

ಮನವಿ ಸಂದರ್ಭದಲ್ಲಿ ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾ ಸಂಯೋಜಕ ಸುರೇಶ ಹಳ್ಳಳ್ಳಿ, ಮುಖಂಡರು ನವೀನ್ ಸಿದ್ದಮ್ಮನವರ, ಆನಂದ ವಡಕನ್ನವರ, ಹಣಮಂತ ಹಲಗೇರಿ, ಪ್ರವೀಣ ಕಟ್ಟಿಮನಿ, ಬಸವರಾಜ ತಡಸದ, ಅಶೋಕ್ ಹಳ್ಳಳ್ಳಿ, ಸಂಜು ತಳಗೇರಿ, ನೀಲಪ್ಪ ಮಾಳಗಿ, ಶಿವಣ್ಣ ಮಾದರ ಅನೇಕರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X