ಹಾವೇರಿ | ನಿವೇಶನ ಹಂಚಿಕೆಗೆ ಗ್ರಾಮಸ್ಥರ ಒತ್ತಾಯ

Date:

Advertisements

ಅಕಾಲಿಕ ಮಳೆ ಹಾಗೂ ಅತಿವೃಷ್ಠಿಯಿಂದ ಬಹುತೇಕರು ಮನೆಗಳನ್ನು ಕಳೆದುಕೊಂಡಿದ್ದು, ವಾಸಿಸಲು ಸಾಧ್ಯವಾಗದಂತಹ ಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಡಿಎಸ್ಎಸ್ ಮುಖಂಡ ಸಂತೋಷ ಆರೋಪಿಸಿದರು.

ಹಾವೇರಿ ತಾಲೂಕಿನ ಕೋಳೂರು ಗ್ರಾಮದ ಖಾಲಿ‌ ಇರುವ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ವಿಳಂಬದ ವಿರುದ್ಧ ಕೋಳೂರು ಗ್ರಾಮ ಪಂಚಾಯಿತಿ ಎದುರು ನಡೆದ ಬೃಹತ್ ಪ್ರತಿಭಟನೆ ವೇಳೆ ಪಿಡಿಒ ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಮಾಡುತ್ತಿದ್ದು, ಸ್ಥಳೀಯರನ್ನು ನಿತ್ಯವೂ ಅಲೆದಾಡಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಖಾಲಿ ನಿವೇಶನಗಳನ್ನು ಕೂಡಲೇ ಹಂಚಿಕೆ ಮಾಡಬೇಕು. ಈಗಲೂ ವಿಳಂಬ ದೋರಣೆ ಮುಂದುವರೆಸಿದರೆ, ಮುಂದಿನ ಪರಿಣಾಮ ಎದುರಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ; ಡಬ್ಲ್ಯೂಎಚ್‍ಒ ತಂಡದಿಂದ ಪರಿಶೀಲನೆ

ಕೋಳೂರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈಶ್ವರಪ್ಪ ಮನವಿ ಸ್ವೀಕರಿಸಿದ್ದು, “ಸಂಬಂಧಪಟ್ಟ ಇಲಾಖೆಯ ಪೂರ್ವಾನುಮತಿ ಪಡೆಯಲು ತಿಳಿಸಿದೆ ಹಾಗೂ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X