ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

Date:

Advertisements

ಶಾಸಕ ರುದ್ರಪ್ಪ ಲಮಾಣಿ ಕಾಣೆಯಾಗಿದ್ದಾರೆಂದು ಆರೋಪಿಸಿರುವ ಹಾವೇರಿ ಕ್ಷೇತ್ರದ ಕೆಲ ಮತದಾರರು, “ನಿಮಗಾಗಿ ರೈಲಿನ ವಿಂಡೋ ಸೀಟ್ ಟಿಕೆಟ್‌ ಕಾಯ್ದಿರಿಸಲಾಗಿದೆ. ದಯವಿಟ್ಟು ಹಾವೇರಿಗೆ ಬನ್ನಿ” ಎಂದು ಆಹ್ವಾನಿಸಿದ್ದಾರೆ.

“ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ ಹಾನಿಯಾಗಿದೆ. ಹಾವೇರಿಯಲ್ಲಿ ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿ ಬಾಲಕ ಮೃತಪಟ್ಟಿದ್ದಾನೆ. ಇಷ್ಟಾದರೂ ಶಾಸಕ ರುದ್ರಪ್ಪ ಲಮಾಣಿ ಸ್ಥಳಕ್ಕೆ ಭೇಟಿ ನೀಡಿಲ್ಲ. ನೊಂದವರ ಅಳಲು ಆಲಿಸಿಲ್ಲ” ಎಂದು ಮತದಾರರು ದೂರಿದ್ದಾರೆ.

“ವಿಧಾನಸಭೆ ಉಪಸಭಾಪತಿಯೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಹಾವೇರಿಯತ್ತ ಬರುತ್ತಿಲ್ಲ. ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಮತದಾರರ ಗೋಳು ಕೇಳುವವರು ಯಾರು?” ಎಂದು ಮತದಾರರು ಅಳಲು ತೋಡಿಕೊಂಡಿದ್ದಾರೆ.‌

Advertisements
ರೈಲು ಟಿಕೆಟ್

ಬೆಂಗಳೂರಿನಿಂದ ಹಾವೇರಿಗೆ ಹೊರಡುವ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ಟೋಬ‌ರ್ 25ರಂದು ರುದ್ರಪ್ಪ ಲಮಾಣಿಯವರ ಹೆಸರಿನಲ್ಲಿ ಸಿಎನ್ಎಎಫ್ ಡಿ-9 ಬೋಗಿಯಲ್ಲಿ 37ನೇ ಸೀಟ್ ಕಾಯ್ದಿರಿಸಲಾಗಿದೆ. ಲಮಾಣಿಯವರ ಮೊಬೈಲ್ ವಾಟ್ಸ್‌ಆ್ಯಪ್‌ಗೆ ಟಿಕೆಟ್ ಕಳುಹಿಸಲಾಗಿದೆ. ಇದೇ ಟಿಕೆಟ್‌ನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಾಂಗ್ರೆಸ್ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠ ಭದ್ರಕೋಟೆಯಾಗಿದೆ: ಎ ಎನ್ ನಟರಾಜ್ ಗೌಡ

ಟಿಕೆಟ್‌ನ ಚಿತ್ರ ಅಪ್‌ಲೋಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ಕೆಲ ಮತದಾರರು, “ಸನ್ಮಾನ್ಯ ಶಾಸಕರಿಗೆ ದುಡ್ಡಿನ ಅಭಾವವೆಂದು ತಿಳಿದು, ಹಾವೇರಿ ವಿಧಾನಸಭಾ ಕ್ಷೇತ್ರದ ಜನತೆಯೇ ಅವರಿಗೆ ರೈಲಿನ ಟಿಕೆಟ್ ಕಾಯ್ದಿರಿಸಿದೆ. ಈ ರೈಲು ಏರಿ ಹಾವೇರಿಗೆ ಬಂದರೆ, ಇಲ್ಲಿ ಜನರ ಸಮಸ್ಯೆಗಳನ್ನು ನೋಡಿ. ಸಾಧ್ಯವಾದರೆ ಪರಿಹರಿಸಿ, ಬೇಕಾದಲ್ಲಿ ಅವರಿಗೆ ಹಾವೇರಿಯಿಂದ ಬೆಂಗಳೂರಿಗೆ ವಾಪಸ್ ಹೋಗಲು ನಾವೇ ರೈಲು ಟಿಕೆಟ್ ಕಾಯ್ದಿರಿಕೊಡುತ್ತೇವೆ. ಇಂತಿ ನಿಮ್ಮ ಬಡಪಾಯಿ ಮತದಾರರು” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X