ಹಾವೇರಿ | ದೇಶಕ್ಕಾಗಿ ಹುತಾತ್ಮರಾದ ಅಮರವೀರ ಸ್ವಾತಂತ್ರ್ಯ ಸೇನಾನಿಗಳ ಆದರ್ಶ ಮೈಗೂಡಿಸಿಕೊಳ್ಳಬೇಕಿದೆ: ಬಸವರಾಜ ಪೂಜಾರ

Date:

ಭಾರತದ ಸ್ವಾತಂತ್ರ್ಯಕ್ಕಾಗಿ ಸಮ್ರಾಜ್ಯಶಾಹಿ ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿ ಹುತಾತ್ಮರಾದ ಅಮರವೀರ ತ್ರಿವಳಿ ಸಂಗಾತಿಗಳಾದ ಮೈಲಾರ ಮಹದೇವಪ್ಪ, ತಿರಕಪ್ಪ ಮಡಿವಾಳರ ಹಾಗೂ ವೀರಯ್ಯ ಹಿರೇಮಠ ಅವರ ತ್ಯಾಗ ಬಲಿದಾನದ ಆದರ್ಶಗಳನ್ನು ವಿದ್ಯಾರ್ಥಿಗಳು, ಯುವಜನರು ಮೈಗೂಡಿಸಿಕೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಕರೆ ನೀಡಿದರು.

- Advertisement -

ಹಾವೇರಿ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ಡಿವೈಎಫ್ಐ, ಎಸ್ಎಫ್ಐ ವತಿಯಿಂದ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

“ಮೈಲಾರ ಮಹಾದೇವಪ್ಪನವರು ಗ್ರಾಮೀಣ ಮಟ್ಟದಲ್ಲಿ ಯುವಜನರನಲ್ಲಿ ಜಾಗೃತಿ ಮೂಡಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಅಣಿನೆರೆಸಿದರು. ಇವರ ಜತೆಗೆ ಮಡದಿ ಸಿದ್ದಮ್ಮನವರು ಮಹಿಳೆಯರನ್ನು ಪ್ರೇರೆಪಿಸಿ ಚಳವಳಿಗೆ ತರುವಲ್ಲಿ ಯಶಸ್ವಿಯಾದರು” ಎಂದರು‌.

“ಮಹಾತ್ಮಾ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ ಪ್ರಾರಂಭಿಸಿ ದಂಡಿ ಯಾತ್ರೆ ಕೈಗೊಂಡಾಗ ಅದರಲ್ಲಿ ಭಾಗವಹಿಸಿದ ಮೈಲಾರ ಮಹಾದೇವಪ್ಪನವರು ಅತಿ ಕಿರಿಯ ಚಳವಳಿಗಾರರಾಗಿದ್ದರು. ಜತೆಗೆ ಕರ್ನಾಟಕದಿಂದ ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಏಕೈಕ ವ್ಯಕ್ತಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ” ಎಂದು ತಿಳಿಸಿದರು.

“1942ರಲ್ಲಿ ಚಲೇಜಾವ್ ಚಳವಳಿ ಪ್ರಾರಂಭವಾಗಿ ಮಹಾತ್ಮ ಗಾಂಧೀಜಿ ಯವರು ಸೆರೆಯಾದ ಬಳಿಕ ಚಳವಳಿಯು ತೀವ್ರ ಸ್ವರೂಪ ತಾಳಿ ದೇಶವ್ಯಾಪಿ ಸ್ವಾತಂತ್ರ್ಯ ಹೋರಾಟ ವ್ಯಾಪಿಸಿತು. ಮಹದೇವಪ್ಪ ಮತ್ತವರ ಸಂಗಾತಿಗಳು ಅಖಂಡ ಧಾರವಾಡ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಾತಂತ್ರ್ಯ ಚಳವಳಿಯನ್ನು ಪ್ರಬಲವಾಗಿ ಕಟ್ಟಿದರು. ಮಹದೇವಪ್ಪ ನೇತೃತ್ವದಲ್ಲಿ 1943ರಲ್ಲಿ ಹೊಸರಿತ್ತಿಯ ಕಂದಾಯ ಕಚೇರಿಯ ಮೇಲೆ ದಾಳಿ ಮಾಡಿದಾಗ ಬ್ರಿಟಿಷ್ ಪೊಲೀಸರ ಗುಂಡಿಗೆ ಬಲಿಯಾದರು. ಇವರೊಂದಿಗೆ ಹಿರೇಮಠ ವೀರಯ್ಯ, ಮಡಿವಾಳ ತಿರಕಪ್ಪನವರೂ ಕೂಡಾ ಹುತಾತ್ಮರಾದರು” ಎಂದರು.

“ಅಪಾರ ತ್ಯಾಗ ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಹೊಣೆ ದೇಶದ ಯುವಜನರ ಮೇಲಿದೆ. ದೇಶದಲ್ಲಿ ಹೆಚ್ಚುತ್ತಿರುವ ಅಸಮಾನತೆಯನ್ನು ಹೋಗಲಾಡಿಸಿ ಸರ್ವರಿಗೂ ಸಮಾನ ಅವಕಾಶಗಳಿಗಾಗಿ, ಘನತೆಯ ಬದುಕಿಗಾಗಿ ಯುವಜನರು ಪಣತೊಡಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜಪ್ಪ ದಳವಾಯಿಯವರು ಸಾಂಸ್ಕೃತಿಕ ಶ್ರಮಜೀವಿ: ಬರಗೂರು ರಾಮಚಂದ್ರಪ್ಪ

ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ಹಿರಿಯ ಹೋರಾಟಗಾರ ರುದ್ರಪ್ಪ ಜಾಬೀನ ಅವರು ಸ್ವಾತಂತ್ರ್ಯ ಸೇನಾನಿ ಮಹದೇವಪ್ಪ ಮೈಲಾರ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು. ಮೈಲಾರ ಮಹದೇವ ಅಮರ ರಹೇ! ತಿರಕಪ್ಪ ಮಡಿವಾಳರ ಅಮರ ರಹೇ! ವೀರಯ್ಯ ಹಿರೇಮಠ ಅಮರ ರಹೇ! ಘೋಷಣೆಗಳು ಮೊಳಗಿದವು. ನಂತರ ವೀರಸೌಧಕ್ಕೆ ತೆರಳಿ ತ್ರಿವಳಿ ಸಂಗಾತಿಗಳ ವೀರ ಸಮಾಧಿಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರುಗಳಾದ ರೇಣುಕಾ ಪಿ ಕೆ, ಖಲಂದರ್ ಅಲ್ಲಿಗೌಡ್ರ, ಶಿಕ್ಷಕರುಗಳಾದ ನಿರಂಜನ ಹಿರೇಮಠ, ಸಿ ಎಚ್ ಹೊಟ್ಟೆಗೌಡ್ರ ಹಾಗೂ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...