ಹಾವೇರಿ | ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ : ಶಾಸಕ ಶ್ರೀನಿವಾಸ ಮಾನೆ

Date:

Advertisements

“ದೇಶದ ಪಾಲ 210 ಲಕ್ಷ ಕೋಟಿ ತಲುಪಿದೆ ಈಚೆಗೆ ಅಮೆರಿಕ ತಳೆದ ನಿಲುವಿನಿಂದ ದೇಶದ ಆರ್ಥಿಕತೆಗೆ ದೊಡ್ಡ ಪಟ್ಟು ಬಿದ್ದಿದ, ಇಂತಹ ಸಂದಿಗ್ಧ ಸಂದರ್ಭದಲ್ಲಿ ಯುವಕರು ವಾಸ್ತವ ಅರಿತು ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ” ಎಂದು ಶಾಸಕ ಶ್ರೀನಿವಾಸ ಮಾನೆ ಯುವಕರಿಗೆ ಕರೆ ನೀಡಿದರು

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಸುರಳೇಶ್ವರ ಗ್ರಾಮದಲ್ಲಿ ಹಾನಗಲ್ಲಿನ ಕುಮಾರೇಶ್ವರ ಕಲಾ ಮತ್ತು ಪಾಣಿಜ್ಯ ಮಹಾವಿದ್ಯಾಲಯದ ಎನ್. ಎಸ್. ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

“ಯುವಕರು ಸಾಮಾಜಿಕ ಜವಾಬ್ದಾರಿ ಹೊತ್ತು, ಜನಜಾಗೃತಿ ಮೂಡಿಸಬೇಕಿದೆ. ಭಾರತೀಯರಲ್ಲಿ ಶಕ್ತಿ, ಸಾಮರ್ಥ್ಯ, ನೈಪುಣ್ಯತೆ ಹೆಚ್ಚಿದೆ. ಆದರೆ ಧರ್ಮ ಜಾತಿ ಇನ್ನಿತರ ವಿಷಯಗಳ ಕಡೆಗೆ ಗಮನ ಸೆಳೆಯಲಾಗುತ್ತಿದೆ. ಇದರಿಂದ ಆರ್ಥಿಕತೆ ಸುಧಾರಣೆ ಕಡೆಗೆ ಗಮನ ಕಡಿಮೆಯಾಗುತ್ತಿದೆ. ನಮ್ಮ ದೇಶ ವಿಶಿಷ್ಟವಾದುದು. ಸಾಮರಸ್ಯ ಸೌಹಾರ್ದತೆಯಿಂದ ಜನ ಬದುಕುತ್ತಿರುವ ಜಗತ್ತಿನಲ್ಲಿಯೇ ಏಕೈಕ ರಾಷ್ಟ್ರ” ಎಂದು ಶಿಬಿರಾರ್ಥಿಗಳಿಗೆ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಫ್ಯಾಸಿಸ್ಟ್‌ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ರಕ್ಷಿಸಿ: ಸಿಪಿಐಎಂಎಲ್‌ ಆಗ್ರಹ

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಯಂಕಮ್ಮ ಬಂಡಿವಡ್ಡರ, ಸದಸ್ಯ ರಹಮತ್ ನಲ್ಲಿಕೊಪ್ಪ, ಜಿ.ಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ತಾ.ಪಂ ಮಾಜಿ ಸದಸ್ಯ ಮಹಬೂಬ ಬ್ಯಾಡಗಿ, ಪ್ರಾಚಾರ್ಯ ಡಾ.ಎಂ.ಎಚ್ ಹೊಳೆಣ್ಣನವರ, ಉಪನ್ಯಾಸಕ ಡಾ.ಪ್ರಕಾಶ ಹೊಳೇರ, ಯೋಜನಾಧಿಕಾರಿ ಡಾ.ಸತ್ಯನಾವಿಸಿ ವಿ.ಬಿ. ಸಹ ಯೋಜನಾಧಿಕಾರಿ ಡಾ. ಬಸನಗೌಡ ಲಕ್ಷ್ಮೀಶ್ವರ, ಡಾ. ಸಿ. ಎಸ್ ಕುಮ್ಮೂರ, ಕೆ. ಎಸ್. ಪಂಚಾಳ. ಗುಡ್ಡಪ್ಪ ಎಸ್. ದಾನಪ್ಪ, ಸಿಂಧೂರ ಪರಸಪ್ಪ ನಾಯಕ, ಬಿ. ಎಂ.bಮೈಳಾರದ, ಮಹಾದೇವಪ್ಪ ಬಂಡಿವಡ್ಡರ, ಹನುಮಂತಪ್ಪ ಹಾನಗಲ್, ಶಿವಪುತ್ರಪ್ಪ ಬಾರ್ಕಿ, ಆನಂದ ಸಮ್ಮಣ್ಣನವರ, ದೇವೇಂದ್ರಪ್ಪ ನಾಯಕ ಅಬ್ದಲಖಾದರ ಶಿರಗೋಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X