ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

Date:

“ಕಾನೂನಿನ ಜ್ಞಾನದಿಂದ ಅನ್ಯಾಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕಾನೂನು ಅರಿವು ಪ್ರತಿಯೊಬ್ಬ ನಾಕರಿಕನ ಜೀವನದಲ್ಲಿ ಅತ್ಯಂತ ಅಗತ್ಯವಾಗಿದೆ. ಭಾರತದಲ್ಲಿ ಮಕ್ಕಳು ಮತ್ತು ಮಹಿಳೆಯರರಿಗೆ ವಿಶೇಷ ಕಾನುನೂಗಳಿವೆ. ಆದ್ದರಿಂದ ಮಹಿಳೆಯರು ಕಾನೂನನ್ನು ತಿಳಿದುಕೊಂಡು ಮಹಿಳೆಯರ ಮೇಲೆ ನಡೆಯುವ ಕಾನೂನುಬಾಹಿರ ಚಟುವಟಿಕೆಗಳಿಗೆ ಮತ್ತು ದೌರ್ಜನ್ಯಗಳಿಗೆ ಧ್ವನಿ ಎತ್ತಿ ನಿಲ್ಲಬೇಕು” ಎಂದು ರವಿ ಓಲೇಕಾರ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಮತ್ತು ಸಮಗ್ರ ಸುಸ್ಥಿರ ಕಾರ್ಯಕ್ರಮ ವತಿಯಿಂದ ಕಾನೂನು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಮಹಿಳೆಯರು ಸಮಾಜದ ಭಾಗವಾಗಿದ್ದು, ಅವರ ಗೌರವ, ಸುರಕ್ಷತೆ ಮತ್ತು ಸಮಾನತೆ ಕಾಪಾಡಲು ಕಾನೂನು ಅತ್ಯಂತ ಪ್ರಮುಖಪಾತ್ರ ವಹಿಸುತ್ತದೆ. ಕಾನೂನು ಅರಿವು ಮಹಿಳೆಯರಿಗೆ ಆತ್ಮ ವಿಶ್ವಾಸ ನೀಡುವುದುರ ಜೊತೆಗೆ ತಮ್ಮ ಹಕ್ಕುಗಳನ್ನು ರಕ್ಷಸಿಕೊಳ್ಳಲು ಶಕ್ತಿಯನ್ನು ಒದಗಿಸುತ್ತದೆ. ಕಾನೂನು ಮಹಿಳೆಯರಿಗೆ ಶಿಕ್ಷಣ ಉದ್ಯೋಗ ಆಸ್ತಿ ಮದುವೆ ಮತ್ತು ವಿಚ್ಛೇದನ್ನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಕಾನೂನು ಸ್ವಸ್ಥವಾಗಿ ಗುರುತಿಸಿದೆ” ಎಂದು ಹೇಳಿದರು.

“ಗೃಹಹಿಂಸೆ ತಡೆ ಕಾಯ್ದೆ 2005, ಲೈಗಿಕ ಕಿರುಕುಳ ತಡೆಕಾಯ್ದೆ 2013, ಬಾಲ್ಯವಿವಾಹ ತಡೆಕಾಯ್ದೆ ಮತ್ತು ಮುಂತಾದ ಕಾನುನೂಗಳು ಮಹಿಳೆಯರ ಮೇಲೆ ನಡೆಯುವ ಹಿಂಸೆ ಮತ್ತು ದೌರ್ಜನ್ಯವನ್ನು ತಡೆಯಲು ಸಹಾಯವಾಗಿದೆ” ಎಂದು ಕಾಯಿದೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

“ಅನ್ಯಾಯ ಸಂಭವಿಸಿದಾಗ ಪೊಲೀಸ್ ಠಾಣೆ. ನ್ಯಾಯಾಲಯ ಮಹಿಳಾ ಆಯೋಗ ಕಾನೂನು ಸೇವಾ ಪ್ರಾಧಿಕಾರಿಗಳ ಮೂಲಕ ನ್ಯಾಯ ಪಡೆಯಲ್ಲು ಕಾನೂನು ಮಹಿಳೆಯರಿಗೆ ಅವಕಾಶ ಕಲ್ಪಸುತ್ತದೆ” ಎಂದು ತಿಳಿಸದರು.

ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿರಪ್ಪ ಶಿರಶಿ ನಿರೂಪಿಸಿದರು. ಮಂಜುಳಾ ನಾಗೋಜಿ ಸ್ವಾಗತಿಸಿದರು. ಹೊನ್ನಮ್ಮ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...