ಹಾವೇರಿ: ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು : ಶಾಸಕ ಶ್ರೀನಿವಾಸ ಮಾನೆ

Date:

Advertisements

“ಹೆಣ್ಣು ಕುಟುಂಬದ ಕಣ್ಣು, ಮಹಿಳೆಯರು ಆರ್ಥಿಕವಾಗಿ ಮಾತ್ರವಲ್ಲದೇ ಸಾಮಾಜಿಕ ಮತ್ತು ರಾಜಕೀಯವಾಗಿಯೂ ಸಬಲರಾಗಬೇಕಿದೆ. ಅಂದಾಗ ಮಾತ್ರ ಇಡೀ ಸಮುದಾಯದ ಶ್ರೇಯೋಭಿವೃದ್ಧಿ ಸಾಧ್ಯವಿದೆ” ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಮತ್ತು ಸಮುದಾಯ ಬಂಡವಾಳ ನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಲವಾರು ವೃತ್ತಿಪರ ತರಬೇತಿ ನೀಡಿ, ಕೌಶಲ್ಯ ಅಭಿವೃದ್ಧಿ ಪಡಿಸಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಶ್ರಮ ವಹಿಸಿದ ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮ ಸರಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳನ್ನು ಜಾರಿಗೊಳಿಸಿದೆ. ಕುಟುಂಬದ ಯಜಮಾನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇನ್ನೂ ಹಲವು ಕಾರ್ಯಕ್ರಮ ನೀಡುತ್ತಿದ್ದು, ಹೆಣ್ಣುಮಕ್ಕಳು ಪ್ರಗತಿಯಾದರೆ ಒಂದು ಕುಟುಂಬ, ಗ್ರಾಮ, ರಾಜ್ಯವೇ ಪ್ರಗತಿಯಾದಂತೆ ಹಾಗಾಗಿ ಸರಕಾರ ಹೆಣ್ಣುಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ” ಎಂದರು.

Advertisements

ತಾಪಂ ಇಒ ಪರಶುರಾಮ ಪೂಜಾರ ಮಾತನಾಡಿ, “ಸಾಮಾಜಿಕ ಆಂದೋಲನ ಅಭಿಯಾನದ ಮೂಲಕ ಸ್ವಸಹಾಯ ಸಂಘಗಳಿಂದ ಹೊರಗುಳಿದವರನ್ನು ಸೇರ್ಪಡೆಗೊಳಿಸಲು ಗಮನ ನೀಡಬೇಕಿದೆ. ಮಹಿಳಾ ಒಕ್ಕೂಟ ಸ್ವಸಹಾಯ ಸಂಘಗಳ ಮೂಲಕ ಸಾಕಷ್ಟು ಸಂಖ್ಯೆಯ ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಿ, ಗೃಹಲಕ್ಷ್ಮೀ, ನರೇಗಾ ಫಲಾನುಭವಿಗಳನ್ನು ಸೇರ್ಪಡೆ ಮಾಡಬೇಕಿದೆ”ಎಂದು ಹೇಳಿದರು.

“ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಹಳ ಪರಿಣಾಮಕಾರಿಯಾಗಿ ಪ್ರತಿಯೊಂದು ಕುಟುಂಬಗಳನ್ನು ಆರ್ಥಿಕವಾಗಿ ಸಬಲಗೊಳಿಸುತ್ತಿವೆ ಒಂದು ಕುಟುಂಬಕ್ಕೆ ವಾರ್ಷಿಕ ಕನಿಷ್ಟ 55-60 ಸಾವಿರ ರೂ. ನೆರವು ಸಿಗುತ್ತಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಜನಸಾಮಾನ್ಯರ ನೆರವಿಗೆ ನಿಂತ ಎಕೈಕ ಸರಕಾರ ನಮ್ಮದಾಗಿದೆ” ಎಂದು ಹೇಳಿದರು.

ಗ್ರಾ.ಪಂ ಅಧ್ಯಕ್ಷೆ ರಾಧಾ ಇಂಗಳಗೆ, ಉಪಾಧ್ಯಕ್ಷೆ ಲಲಿತಾ ಪತ್ತಾರ, ಸನಾವುಲ್ಲಾ ಮುಲ್ಲಾ, ನಾರಾಯಣ ಕವಾರಿ, ಮಾರುತಿ ಇಂಗಳಕಿ, ವಿರುಪಾಕ್ಷಪ್ಪ ತಳವಾರ, ಖಾದರಸಾಬ ಮೂಲಿಮನಿ ಹಜ್ಜೆಖಾನ್ ಹೊಂಡದ ಹಸನಖಾನ್ ಹೊಂಡದ, ದೇವೇಂದ್ರಪ್ಪ ಭೈರಕ್ಕನವರ, ಮಹೇಶ ಗಿರಿಯಣ್ಣನವರ ಗುಡ್ಡಪ್ಪ ಜೋಲಿ, ಹುಲಪ್ಪ, ವಾರ್ಕಿ, ಶಶಿಕುಮಾರ ಭೈರಕ್ಕನವರ ಸೇರಿದಂತೆ ಗ್ರಾಪಂ ಸದಸ್ಯರು, ಮಹಿಳಾ ಒಕ್ಕೂಟಗಳ ಪದಾಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X