ಎಸ್ಐಆರ್ ಮೂಲಕ ಬಹುಜನರನ್ನು ಮತಪಟ್ಟಿಯಿಂದ ತೆಗೆದು ಹಾಕುವ ಹುನ್ನಾರ ಮಾಡುತ್ತಿದ್ದರೆ. ಇದನ್ನು ನಾವು ತಡೆಗಟ್ಟಬೇಕೆಂದು ಸಾರ್ವಜನಿಕರಿಗೆ ಎಸ್ಐಆರ್ ಕುರಿತು ಜಾಗೃತಿ ಸಭೆಯನ್ನು ಉಮ್ಮತ್ ವೆಲ್ಫೇರ್ ಟ್ರಸ್ಟ್ ಹಮ್ಮಿಕೊಳ್ಳಲಾಯಿತು.
ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಉಮ್ಮತ್ ವೆಲ್ಫೇರ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ SIR ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು.
ಸಭೆಯಲ್ಲಿ ಸಾರ್ವಜನಿಕರಿಗೆ ಎಸ್ಐಆರ್ ಪ್ರಕ್ರಿಯೆಯ ಕುರಿತು ಸರಿಯಾದ ಮಾಹಿತಿ ನೀಡುವುದು. ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು. ಯಾವುದೇ ಅರ್ಹ ವ್ಯಕ್ತಿ ಮಾಹಿತಿ ಕೊರತೆಯಿಂದ ಮತಪಟ್ಟಿಯಿಂದ ವಂಚಿತರಾಗದಂತೆ ಸ್ಥಳೀಯ ಮಟ್ಟದಲ್ಲಿ ಸಹಾಯ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಾರ್ವಜನಿಕರಿಗೆ ತಲುಪುವ ಕಾರ್ಯವನ್ನು ಮತ್ತಷ್ಟು ಬಲಪಡಿಸುವುದು, ಸಮನ್ವಯ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು SIR ಪ್ರಕ್ರಿಯೆ ಅರ್ಥಮಾಡಿಕೊಳ್ಳಲು ತೊಂದರೆ ಅನುಭವಿಸುತ್ತಿರುವ ಜನರಿಗೆ ನೇರ ಸಹಾಯ ಒದಗಿಸುವ ಕುರಿತು ಚರ್ಚೆ ನಡೆಯಿತು.
ಈ ಸಭೆಯಲ್ಲಿ ಟ್ರಸ್ಟಿನ ಅಧ್ಯಕ್ಷರು ಮುಷ್ತಾಕ್ ಅಹ್ಮದ್ ಸೈಕಲಗಾರ್, ಕಾರಗಯದರ್ಶಿ ಅನ್ಸಾರ್ ಖಾಜಿ ಅವರ ನೇತೃತ್ವದಲ್ಲಿ ನಡೆಯಿತು. ಜೊತೆಗೆ ಘೌಸ್ ಅಂಗಡಿ, ಶಫಿಯುಲ್ಲಾ ಯಲ್ಲಾಪುರ (ಟ್ರಸ್ಟಿ), ಟ್ರಸ್ಟಿ ಸಲಹೆಗಾರರು ಸನಾಉಲ್ಲಾ ತೆರೇದಹಳ್ಳಿ, ಸದಸ್ಯರು ಜೆಬ್ರಾನ್ ಖಾನ್ ನದೀಮುಲ್ಲಾ ಅವರು ಸಕ್ರಿಯವಾಗಿ ಭಾಗವಹಿಸಿದರು.




