ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನಾಲ್ಕರ್ ಕ್ರಾಸ್ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 8ರಂದು ನಾಲ್ಕರ್ ಕ್ರಾಸ್ ಬಳಿಯ ಹೋಟೆಲ್ನಲ್ಲಿ ಜೋಡಿಗಳು ತಂಗಿದ್ದರು. ಈ ವೇಳೆ, ಅವರ ಕೊಠಡಿಗೆ ನುಗ್ಗಿದ ಯುವಕರ ಗುಂಪು ಅನೈತಿಕ ಪೊಲೀಸ್ಗಿರಿ ನಡೆಸಿತ್ತು. ಆ ಗುಂಪು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಸಂತ್ರಸ್ತ ಮಹಿಳೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರು. ಬಳಿಕ, ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಈ ಹಿಂದೆ, ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ, ಅಕ್ಕಿಆಲೂರಿನ ಮೀನು ವ್ಯಾಪಾರಿ ಇಬ್ರಾಹಿಂ ಖಾದರ್ ಗೌಸ್ (27) ಮತ್ತು ಕಾರು ಚಾಲಕ ತೌಸಿಫ್ ಅಹಮದ್ ಚೌಟಿ ಅಲಿಯಾಸ್ ಕಾಟ್ಲ (25) ಎಂಬ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮತ್ತೋರ್ವ ಆರೋಪಿ ಮಹಮ್ಮದ್ ಸೈಫ್ ಸಾವಿಕೇರಿ ಎಂಬಾತನಿಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಿಕಿತ್ಸೆ ಪೂರ್ಣಗೊಂಡ ಬಳಿಕ ಆತನನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಬೇಕೆಂಬ ಆಗ್ರಹಗಳೂ ಕೇಳಿ ಬಂದಿವೆ. ಅಲ್ಲದೆ, ಪ್ರಕರನದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದ ಮೇಲೆ ಹಾನಗಲ್ ಪೊಲೀಸ್ ನಿರೀಕ್ಷಕ ಎಸ್.ಆರ್ ಶ್ರೀಧರ್ ಮತ್ತು ಕಾನ್ಸ್ಟೆಬಲ್ ಇಲಿಯಾಜ್ ಶೇಟಸನಾಡಿ ಅವರನ್ನು ಅಮಾನತುಗೊಳಿಸಲಾಗಿದೆ.