ಹಾವೇರಿ | ಡಿಸೆಂಬರ್ 18ರಂದು ‘ಮಾದಿಗರ ಆತ್ಮಗೌರವ ಸಮಾವೇಶ’

Date:

Advertisements

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್‌ ಭವನದಲ್ಲಿ ‘ಮಾದಿಗರ ಆತ್ಮಗೌರವ ಸಮಾವೇಶ’ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.

ಜಿಲ್ಲೆಯ ಕಾಗಿನೆಲೆಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸದಾಶಿವ ಆಯೋಗದ ಜಾರಿಗಾಗಿ ಹಾಗೂ ಮಾದಿಗ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಒತ್ತಾಯಿಸುತ್ತೇವೆ ಎಂದರು.

ಮಾದಿಗ ಸಮಾಜದವರು ಎಲ್ಲಾ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಬೇಕಾಗಿದೆ. ಡಿ.18, ಸೋಮವಾರ ಜರುಗುವ ಮಾದಿಗರ ಆತ್ಮಗೌರವ ಸಮಾವೇಶಕ್ಕೆ ಜಿಲ್ಲೆಯ ಮಾದಿಗ ಸಮಾಜದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಮುಖಂಡರು, ಹಿರಿಯರು, ಯುವಕರು, ಮಹಿಳೆಯರು, ಪ್ರತಿಯೊಬ್ಬರೂ ಮಾದಿಗರ ಆತ್ಮಗೌರವ  ಸಮಾವೇಶಕ್ಕೆ ಪಕ್ಷಾತೀಕವಾಗಿ ಆತ್ಮಗೌರವದಿಂದ ಆಗಮಿಸಿ ಸಮಾಜವೇಶ ಯಶಸ್ವಿಗೊಳಿಸಿ ಎಂದು ಅವರು ಕೋರಿದರು.

Advertisements

ಈ ಸಂದರ್ಭದಲ್ಲಿ ಹಾವೇರಿ ವಿಧಾನಸಭಾ ಮೀಸಲು  ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ, ನಿವೃತ್ತ ಉಪನಿರ್ದೇಶಕ ಎಂ. ಆಂಜನೇಯ, ದಲಿತ ಮುಖಂಡರಾದ ಸುರೇಶ ಆಸಾದಿ, ನಾಗರಾಜ ಹಾವನೂರ, ಮಾರುತಿ ಕಾಗಿನೆಲ್ಲೆ, ಸುಭಾಸ ಮಾಳಗಿ, ಹನಮಂತಪ್ಪ ಸಿ.ಡಿ, ನಿವೃತ್ತ ಶಿಕ್ಷಕರಾದ ನಾಗೇಂದ್ರಪ್ಪ ಹರಿಜನ, ಜಗದೀಶ ಹರಿಜನ, ನಾಗೇಂದ್ರ ಹರಿಜನ, ನಾಗರಾಜ ಮೊಟೆಬೆನ್ನೂರ, ಪ್ರಕಾಶ ಹರಿಜನ, ಲಲಿತಾ ಹರಿಜನ, ಈರಪ್ಪ ಹರಿಜನ, ಹನುಮಂತಪ್ಪ ಬೇವಿನಮರದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಮುದಾಯದವರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X