ಹಾವೇರಿ | ಗುರುವಿನ ಮಾರ್ಗದರ್ಶನದಿಂದ ಯಶಸ್ಸು ಗಳಿಸಲು ಸಾಧ್ಯ: ಶ್ರೀ ಬಸವಶಾಂತಲಿಂಗ ಸ್ವಾಮಿಗಳು

Date:

“ಗುರು ಬಲ ಮಾರ್ಗದರ್ಶನದಿಂದ ಉನ್ನತ ಸ್ಥಾನಮಾನ, ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ” ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು ಹೇಳಿದರು.

- Advertisement -

ಹಾವೇರಿ ಪಟ್ಟಣದ ಹೊಸಮಠದಲ್ಲಿ ಆಯೋಜಿಸಿದ ಗುರು ಪೂರ್ಣಿಮೆ ದಿನದ ನಿಮಿತ್ತವಾಗಿ ಶ್ರೀಗಳಿಗೆ ಸದ್ಭಕ್ತರಿಂದ ಗುರುವಂದನಾ ಸ್ವೀಕರಿಸಿ ಶ್ರೀ ಅರ್ಶಿವಚನ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ರಾಮಾಯಣ-ಮಹಾಭಾರತ ಕಾಲದಿಂದಲೂ ಪೌರಾಣಿ ಮತ್ತು ಜಗತ್ತಿನ ಇತಿಹಾಸ ನೋಡಿದಾಗ, ರಾಜ-ಮಹಾರಾಜರುಗಳು, ತಮ್ಮ ಸಾಮ್ರಾಜ್ಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಕಾದರೆ, ಗುರುವಿನ ಆಶೀರ್ವಾದ, ಮಾರ್ಗದರ್ಶನ ಪಡೆದುಕೊಂಡು ಮುನ್ನಡಿಯುತ್ತಿದ್ದರು. ಅಜ್ಞಾನದಿಂದ-ಜ್ಞಾನದೆಡೆಗೆ, ಕತ್ತಲೆಯಿಂದ -ಬೆಳಕಿನೆಡಗೆ, ಭಯದಿಂದ-ನಿರ್ಭಯದೆಡೆಗೆ ಕರೆದುಕೊಂಡು ಹೋಗುವ ಶಕ್ತಿ, ಗುರು ಶಕ್ತಿ ಮಾತ್ರ” ಎಂದರು.

“ಗುರು ಸಂಸ್ಕೃತಿ ಪರಂಪರೆಗೆ ಹೆಚ್ಚಿನ ಮಹತ್ವವಿದೆ. ಭಕ್ತಿ,ಶ್ರದ್ಧೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಯಶಸ್ಸು ಗಳಿಸಲು ಸಾಧ್ಯವಾಗಲಿದೆ. ವ್ಯಾಸ ಮಹರ್ಷಿ ಜನ್ಮ ದಿನವಾಗಿಯೂ ಆಚರಣೆ ಮಾಡಲಾಗುವುದು” ಎಂದು ಹೇಳಿದರು‌.

“ದೇಶದಲ್ಲಿ ಗುರು ಪೂರ್ಣಿಮೆಯನ್ನು ಆಚರಿಸುತ್ತೇವೆ. ಹರ ಮುನಿದರು ಗುರು ಕಾಯಿವನು ಎಂಬ ನುಡಿಯಂತೆ, ಗುರು ಪಥದಿಂದ ಬದುಕು ಉಜ್ವಲವಾಗಲಿದೆ. ಶ್ರದ್ಧೆ, ಭಕ್ತಿಯ ಮಾರ್ಗದರ್ಶನ ಎಲ್ಲರೂ ಮೈಗೂಡಿಸಿಕೊಳ್ಳಲಿ” ಎಂದು ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀಮಠದ ಭಕ್ತರು ರುದ್ರೇಶ ಚಿನ್ನಣ್ಣನವರ, “ಗುರು ಬಲ ಎಲ್ಲ ಬಲಕ್ಕಿಂತ ಶ್ರೇಷ್ಠವಾಗಿದೆ. ಪ್ರತಿಯೊಬ್ಬರಿಗೂ ಗುರು ಪ್ರಭಾವ ಆಗಿರುತ್ತದೆ. ಗುರು ಆರ್ಶಿವಾದ ಮಾರ್ಗದರ್ಶನ ಸದುಪಯೋಗ ಪಡಿಸಿಕೊಳ್ಳಲು ನಾವೆಲ್ಲರೂ ಮುಂದಾಗೋಣ” ಎಂದರು.

ಹೊಸಮಠದ ಶ್ರೀಗಳು ಶ್ರೀ ಬಸವಶಾಂತಲಿಂಗ ಸ್ವಾಮೀಗಳಿಗೆ, ಗೌರವ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮಠದ ಭಕ್ತರು ಪರಶುರಾಮ ಹರ್ಲಾಪುರ, ಜಯದೇವ ಕೆರೂಡಿ, ಉಡಚಪ್ಪ ಮಾಳಗಿ, ಸೋಮಣ್ಣ ಸವೂರ, ಎ.ಎಚ್ ಕಬ್ಬಿಣಕಂತಿಮಠ,  ನಿಂಗಪ್ಪ ಆರೇರ, ಹೊನ್ನಪ್ಪ ಅಗಸಿಬಾಗಿಲ, ಅಮೀರಜಾನ್ ಬೇಪಾರಿ, ಶಾಹಿದ್ ದೇವಿಹೊಸೂರ, ಮಂಜಣ್ಣ ಗಾಜೀಗೌಡ್ರ, ಶ್ರೀಮತಿ ಹೇಮಾವತಿ ಹರ್ಲಾಪುರ, ನವೀದ್ ಅಮ್ಮಿನಭಾವಿ, ಮಾಲತೇಶ ಆನವಟ್ಟಿ, ನಿವೃತ್ತ ಅಧಿಕಾರಿ ಮಹಾದೇವಪ್ಪ ಕುಮ್ಮೂರ, ಗಣೇಶ ಹೆಚ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...