ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

Date:

Advertisements

ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. “ಆರೋಗ್ಯ ಇಲಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲೆಯ ಸಮಗ್ರ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಹಾಗೂ ಸುಗಮ ಆಡಳಿತಕ್ಕಾಗಿ ಇಲಾಖೆಯ ಎಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕಾರ ನೀಡಬೇಕು” ಎಂದು ಕೋರಿದರು.

ಈ ಹಿಂದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ರತಿಕಾಂತ ಸ್ವಾಮಿ ಅವರನ್ನು ಔರಾದನ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಮಕ್ಕಳ ತಜ್ಞರ ಹುದ್ದೆಗೆ ವರ್ಗಾಯಿಸಲಾಗಿದೆ. ಸದರಿ ಹುದ್ದೆಗೆ ಭಾಲ್ಕಿ ತಾಲೂಕು ಆರೋಗ್ಯಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಧ್ಯಾನೇಶ್ವರ ನೀರಗುಡೆ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ.

Advertisements

ಕಾರ್ಯಕ್ರಮದಲ್ಲಿ ಅನುಷ್ಠಾನಾಧಿಕಾರಿಗಳಾದ ಡಾ: ರಾಜಶೇಖರ ಪಾಟೀಲ , ಡಾ: ಕಿರಣ ಪಾಟೀಲ, ಡಾ: ಶರಣಯ್ಯಾ ಸ್ವಾಮಿ, ಡಾ: ಶೆಂಕ್ರೆಪ್ಪಾ ಬೊಮ್ಮಾ , ಡಾ:ದಿಲೀಪ ಡೊಂಗ್ರೆ, ಡಾ:ವಿ.ಜಿ. ರೆಡ್ಡಿ , ಡಾ: ನಿತೀನ ಬಿರಾದಾರ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ: ಶಿವಕುಮಾರ ಸಿದ್ದೇಶ್ವರ, ಡಾ: ಸಂಗಾರೆಡ್ಡಿ , ಡಾ:ಅಶೋಕ ಮೈಲಾರೆ, ಡಾ: ಗಾಯತ್ರಿ, ಮತ್ತು ವೈದ್ಯಾಧಿಕಾರಿಗಳು ಡಾ: ಅನೀಲ ರಾಯಪಳ್ಳಿ , ಡಾ: ರವಿ ಕಲಶೆಟ್ಟಿ,
ಡಾ: ಶರಣಪ್ಪದ ಮುಡುಬಿ, ಡಾ:ಭಗವಾನ, ಡಾ:ಗುರುರಾಜ ಗೌರಿ, ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಾದ ರಾಜುಕುಮಾರ ಬಿ. , ಎಂ.ಎ. ಸತ್ತಾರ, ಮೌನದಾಸ, ಪ್ರಶಾಂತ, ಕಾಶಿನಾತ ಡ್ಯಾಮ, ಉಮೇಶ ಬಿರಾದಾರ, ಜಾವೇದ್ ಕಲ್ಯಾಣಕರ , ಮಲ್ಲಿಕಾರ್ಜುನ ಗುಡ್ಡೆ, ವೀರಶೆಟ್ಟಿ, ಚನ್ನಶೆಟ್ಟಿ, ಶ್ಯಾಮರಾವ ಉಮೇಶ ಪ್ರದಸ, ಶಿವರಾಜ ತಡೋಳ್ಗೆ, ವಿಶಾಲ, ಕಿಶನ ರಾಠೋಡ್, ದೇವಿದಾಸ, ಸೂರ್ಯಕಾಂತ, ನಂದಕುಮಾರ, ಪವನಕುಮಾರ, ಲಾಲಯ್ಯಾ ಉಪಸ್ಥಿರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X