ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

Date:

ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.

- Advertisement -

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. “ಆರೋಗ್ಯ ಇಲಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲೆಯ ಸಮಗ್ರ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಹಾಗೂ ಸುಗಮ ಆಡಳಿತಕ್ಕಾಗಿ ಇಲಾಖೆಯ ಎಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕಾರ ನೀಡಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಹಿಂದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ರತಿಕಾಂತ ಸ್ವಾಮಿ ಅವರನ್ನು ಔರಾದನ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಮಕ್ಕಳ ತಜ್ಞರ ಹುದ್ದೆಗೆ ವರ್ಗಾಯಿಸಲಾಗಿದೆ. ಸದರಿ ಹುದ್ದೆಗೆ ಭಾಲ್ಕಿ ತಾಲೂಕು ಆರೋಗ್ಯಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಧ್ಯಾನೇಶ್ವರ ನೀರಗುಡೆ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ.

ಕಾರ್ಯಕ್ರಮದಲ್ಲಿ ಅನುಷ್ಠಾನಾಧಿಕಾರಿಗಳಾದ ಡಾ: ರಾಜಶೇಖರ ಪಾಟೀಲ , ಡಾ: ಕಿರಣ ಪಾಟೀಲ, ಡಾ: ಶರಣಯ್ಯಾ ಸ್ವಾಮಿ, ಡಾ: ಶೆಂಕ್ರೆಪ್ಪಾ ಬೊಮ್ಮಾ , ಡಾ:ದಿಲೀಪ ಡೊಂಗ್ರೆ, ಡಾ:ವಿ.ಜಿ. ರೆಡ್ಡಿ , ಡಾ: ನಿತೀನ ಬಿರಾದಾರ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ: ಶಿವಕುಮಾರ ಸಿದ್ದೇಶ್ವರ, ಡಾ: ಸಂಗಾರೆಡ್ಡಿ , ಡಾ:ಅಶೋಕ ಮೈಲಾರೆ, ಡಾ: ಗಾಯತ್ರಿ, ಮತ್ತು ವೈದ್ಯಾಧಿಕಾರಿಗಳು ಡಾ: ಅನೀಲ ರಾಯಪಳ್ಳಿ , ಡಾ: ರವಿ ಕಲಶೆಟ್ಟಿ,
ಡಾ: ಶರಣಪ್ಪದ ಮುಡುಬಿ, ಡಾ:ಭಗವಾನ, ಡಾ:ಗುರುರಾಜ ಗೌರಿ, ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಾದ ರಾಜುಕುಮಾರ ಬಿ. , ಎಂ.ಎ. ಸತ್ತಾರ, ಮೌನದಾಸ, ಪ್ರಶಾಂತ, ಕಾಶಿನಾತ ಡ್ಯಾಮ, ಉಮೇಶ ಬಿರಾದಾರ, ಜಾವೇದ್ ಕಲ್ಯಾಣಕರ , ಮಲ್ಲಿಕಾರ್ಜುನ ಗುಡ್ಡೆ, ವೀರಶೆಟ್ಟಿ, ಚನ್ನಶೆಟ್ಟಿ, ಶ್ಯಾಮರಾವ ಉಮೇಶ ಪ್ರದಸ, ಶಿವರಾಜ ತಡೋಳ್ಗೆ, ವಿಶಾಲ, ಕಿಶನ ರಾಠೋಡ್, ದೇವಿದಾಸ, ಸೂರ್ಯಕಾಂತ, ನಂದಕುಮಾರ, ಪವನಕುಮಾರ, ಲಾಲಯ್ಯಾ ಉಪಸ್ಥಿರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...