ಕೊಡಗು | ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಹೃದ್ರೋಗ ಚಿಕಿತ್ಸೆ ಲಭ್ಯ : ಶಾಸಕ ಡಾ ಮಂಥರ್ ಗೌಡ

Date:

Advertisements

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ‘ ಅವೆನ್ಸಿಸ್ 2025 ‘ ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಡಾ ಮಂಥರ್ ಗೌಡ ” ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ. ಅತ್ಯಂತ ಸುಸರ್ಜಿತ ಆಸ್ಪತ್ರೆಯನ್ನಾಗಿ, ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ದೊರೆತಿದೆ. ಮೆಡಿಕಲ್ ವಿಧ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮ, ಸಾರ್ವಜನಿಕರು ಸಹ ಪ್ರಯೋಜನ ಪಡೆದುಕೊಳ್ಳುವಂತೆ ” ಕರೆ ಕೊಟ್ಟರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್ ಕಾಲೇಜಿನ ಆಡಳಿತ ವರ್ಗ,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿ ಹತ್ತು ವರ್ಷ ತುಂಬಿದ್ದರೂ ಡಾ ಮಂತರ್ ಗೌಡ ರವರು ಶಾಸಕರಾಗಿ ಆಯ್ಕೆಗೊಂಡ ನಂತರ ಆಸ್ಪತ್ರೆಯಲ್ಲಿ ಅಭಿವೃದ್ಧಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಮೆಡಿಕಲ್ ಕಾಲೇಜ್ ನಿರ್ದೇಶಕ ಡಾ ಲೋಕೇಶ್ ಮಾತನಾಡಿ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನೀಡಲಾಗಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯಕ್ಕೆ ಸಂಭಂದಿಸಿದ ಉಪಯುಕ್ತ ಕಾರ್ಯಕ್ರಮ ನೀಡಲಾಗುವುದು ಎಂದರು.

Advertisements

ಹೆಚ್ಒಡಿ ಡಾ ಪುರುಷೋತ್ತಮ ಮಾತನಾಡಿ ಮೆಡಿಕಲ್ ಕಾಲೇಜಿನ ವಿಚಾರದಲ್ಲಿ ಶಾಸಕರಾದ ಡಾ ಮಂತರ್ ಗೌಡ ರವರು ಸಂಪೂರ್ಣ ನೆರವು ನೀಡುತ್ತಿದ್ದು ಸಂಸ್ಥೆ ಅಭಾರಿಯಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಆಸ್ಪತ್ರೆಯ ಮುಖ್ಯಸ್ಥ ಡಾ ವಿಶಾಲ್, ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹೆಚ್ ಎ ಹಂಸ,ಡಾ ಸೋಮಶೇಖರ್, ಡಾ ಮಂಜುನಾಥ್,ಕಾರ್ಯನಿರ್ವಾಹಕ ಅಧಿಕಾರಿ ರೋಹಿಣಿ, ಮಾಜಿ ನಗರ ಸಭಾ ಸದಸ್ಯ ಕೆ ಜಿ ಪೀಟರ್, ಪುಲಿಯಂಡ ಜಗದೀಶ್,ಪ್ರಭು ರೈ,ವಿ ಜಿ ಮೋಹನ್, ಚಂದ್ರಶೇಖರ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X