ಚಿಕ್ಕಮಗಳೂರು | ಓಮ್ನಿ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಪ್ರಾಣಾಪಾಯದಿಂದ ಪಾರು

Date:

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗಳವಾರ ಸುರಿದ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೃಹತ್‌ ಗಾತ್ರದ ಮರವೊಂದು ಓಮ್ನಿ ಕಾರಿನ ಮೇಲೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಶೃಂಗೇರಿ ತಾಲೂಕಿನ ಕುಂಚೇಬೈಲು ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಓಮ್ನಿ ಕಾರು ಸಂಪೂರ್ಣ ಜಖಂ ಆಗಿದೆ.

ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಕಾರಿನಲ್ಲಿ ಕಾಫಿ ತೋಟಕ್ಕೆ ಕೂಲಿ ಕಾರ್ಮಿಕರನ್ನು ಕರೆದೊಯ್ದು ಮನೆಗೆ ಊಟಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಘಟನೆ ನಡೆಯುವ ಕೆಲ ನಿಮಿಷಗಳ ಹಿಂದಷ್ಟೇ ಪ್ರದೀಪ್ ಕಾರಿನಿಂದ ಇಳಿದು ಮನೆಗೆ ತೆರಳಿದ್ದರು ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮರ ಬಿದ್ದಿದ್ದರಿಂದ ಚಿಕ್ಕಮಗಳೂರು – ಶೃಂಗೇರಿ ನಡುವಿನ ರಸ್ತೆ ಸಂಚಾರ ಸಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು.

ಮಂಗಳವಾರ ಮಧ್ಯಾಹ್ನದಿಂದಲೇ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಗೋಣಿಬೀಡು ಸುತ್ತಮುತ್ತ ವ್ಯಾಪಕ ಮಳೆಯಾಗಿದೆ. ಮಲೆನಾಡಿನಲ್ಲಿ ಕಳೆದ ಮೂರು ದಿನದಿಂದ ನಿರಂತರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲವೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮೇ 26ಕ್ಕೆ ಎದ್ಧೇಳು ಕರ್ನಾಟಕ ಅಭಿನಂದನಾ ಸಮಾರಂಭ; ದೊರೆಸ್ವಾಮಿ ಅವರಿಗೆ ಗೌರವ

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೇಹಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು...

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ...