ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

Date:

Advertisements

ಬೀದರ್‌ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಬೇಕೆಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

ಮುಂಗಾರು ಅಧಿವೇಶನದಲ್ಲಿ ಬುಧವಾರ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು, ʼಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮಳೆ ಔರಾದ(ಬಿ) ಕ್ಷೇತ್ರದಲ್ಲಾಗಿದೆ. ಒಂದೇ ದಿನ 300 ಮಿ.ಮಿ. ಮಳೆ ದಾಖಲಾಗಿದ್ದು, ಸುಮಾರು 30-40 ಜಾನುವಾರುಗಳು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮ‌ನೆಗಳು ಕುಸಿದು ಬಿದ್ದಿವೆʼ ಎಂದು ವಿವರಿಸಿದರು.

ʼರೈತರು ಬೆಳೆದ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ ಸೇರಿದಂತೆ ಎಲ್ಲ ಬೆಳೆಗಳು‌ ನೀರಿನಲ್ಲಿ ಮುಳುಗಡೆಯಾಗಿವೆ. ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಅಂದಾಜು 10 ಸಾವಿರ ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಸ್ತೆ, ಸೇತುವೆ, ಕೆರೆಗಳು ಒಡೆದಿರುವುದರಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆʼ ಎಂದರು.

Advertisements

ʼಔರಾದ್‌, ಕಮಲನಗರ ತಾಲೂಕಿನ ಚಿಕ್ಲಿ,‌ ನಂದಿ‌ ಬಿಜಲಗಾಂವ, ಬೋಂತಿ, ದಾಬಕಾ, ನಾಗಮಾರಪಳ್ಳಿ ಸೇರಿದಂತೆ ಎಲ್ಲ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿಯಾಗಿದೆ‌. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆʼ ಎಂದರು.

ಇದನ್ನೂ ಓದಿ : ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ರಾಜ್ಯದ ಗಡಿ ತಾಲ್ಲೂಕು ಮತ್ತು ಹಿಂದುಳಿದ ಪ್ರದೇಶವಾಗಿದ್ದು, ಮುಖ್ಯಮಂತ್ರಿಗಳು ಔರಾದ(ಬಿ) ಕ್ಷೇತ್ರವನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಿಸಿ ವಿಶೇಷ ಅನುದಾನ ಒದಗಿಸಬೇಕೆಂದು ಸರ್ಕಾರಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಚಾಮರಾಜನಗರ | ರಾಜ್ಯದ ಅಭಿವೃದ್ಧಿ, ಆಡಳಿತ ಸುಧಾರಣೆಗೆ ದೇವರಾಜ ಅರಸು ಕೊಡುಗೆ ಅಪಾರ

ಚಾಮರಾಜನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

Download Eedina App Android / iOS

X