ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

  • ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆ
  • ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇದು ಏಪ್ರಿಲ್ 10 ವರೆಗೂ ಮುಂದುವರೆಯುವ ಸಾಧ್ಯತೆಯಿದೆ ಹಾಗೂ ಇದೇ ಸಮಯದಲ್ಲಿ ಒಂದು ಅಧಿಕ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರದಿಂದ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ನಾನಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಜೋರು ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಏ.8ರವೆಗೆ ಧಾರಾಕಾರ ಮಳೆಯಾಗಲಿದೆ.

ಏ. 8ರಂದು ಅಧಿಕ ಮಳೆ ಸಾಧ್ಯತೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರದವರೆಗೂ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಮಿ.ಮೀ, ಎಚ್‌ಎಎಲ್‌ನಲ್ಲಿ 4 ಮಿ.ಮೀ ಮಳೆ ದಾಖಲಾಗಿದೆ.

ಕರ್ನಾಟಕದಲ್ಲಿ ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆ 36 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 37 ಡಿಗ್ರಿ ಸೆಲ್ಸಿಯಸ್, ಗದಗ 37 ಡಿಗ್ರಿ ಸೆಲ್ಸಿಯಸ್, ವಿಜಯಪುರ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕೊಪ್ಪಳ್ಳದಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಕನಿಷ್ಠ ಉಷ್ಣಾಂಶ ಚಿಕ್ಕಮಗಳೂರಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಬೆಂಗಳೂರಿನಲ್ಲಿ ಮೂರು ದಿನ ಮಳೆ

ಬೆಂಗಳೂರಿನಲ್ಲಿ ಮುಂದಿನ ಎರಡರಿಂದ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಗರದಲ್ಲಿ ಏಪ್ರಿಲ್ 7ರವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಈ ವೇಳೆ, ನಗರದಲ್ಲಿ ಉಷ್ಣಾಂಶ ಗರಿಷ್ಠ 34ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...