ಬೀದರ್‌ | ಹೈಕೋರ್ಟ್‌ ಆದೇಶ : ರಸ್ತೆ, ಚರಂಡಿ ನಿರ್ಮಾಣಕ್ಕೆ 1.30 ಕೋಟಿ ಮಂಜೂರು

Date:

Advertisements

2022ರಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದ ಅನ್ವಯ ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ₹1.30 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಹೇಳಿದ್ದಾರೆ.

ಕಮಲನಗರ ತಾಲೂಕು ಕೇಂದ್ರದ ಎಸ್ಸಿ, ಎಸ್ಟಿ ಬಡಾವಣೆಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ₹98.65 ಲಕ್ಷ ಹಾಗೂ ಕಮಲನಗರ ತಾಲೂಕಿನ ಸೋನಾಳ ಗ್ರಾಮದ ಪರಿಶಿಷ್ಟ ಜಾತಿ (ಬಸವನಗರ) ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ₹32.00 ಲಕ್ಷ ಸೇರಿ ಒಟ್ಟು ₹130.65 ಲಕ್ಷ ಅನುದಾನ ಮಂಜೂರಾಗಿದ್ದು, ಈಗಾಗಲೇ ಎರಡು ಕಾಮಗಾರಿಗಳಿಗೆ ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆಯಿಂದ 2024 ಅಕ್ಟೋಬರ್ 3ರಂದು ಟೆಂಡರ್ ಕರೆಯಲಾಗಿದೆ‌ʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಮಲನಗರ ಹಾಗೂ ಸೋನಾಳ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಸದರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆದು 2022 ಡಿಸೆಂಬರ್‌ 5ರಂದು ಆದೇಶವಾಗಿತ್ತು. ಹೈಕೋರ್ಟ್ ಆದೇಶದ ಅನುಸಾರ ಸರ್ಕಾರದಿಂದ 2024ರ ಫೆಬ್ರವರಿ 20ರಂದು 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ಎರಡು ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಿದೆʼ ಎಂದು ಹೇಳಿದರು

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಜನಸಾಮಾನ್ಯರು ಕೂಡ ತಮ್ಮ ಮೂಲಭೂತ ಸೌಲಭ್ಯ ಪಡೆಯಲು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಸರ್ಕಾರದಿಂದ ಅನುದಾನ ಪಡೆಯಬಹುದಾಗಿದೆ ಎಂದು ಗುರುನಾಥ ವಡ್ಡೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X