ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

Date:

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.

- Advertisement -

2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ ಕ್ಷೇತ್ರಗಳಿಗೆ ಹೋಲಿಸಿದರೆ ಮೈಸೂರು ನಗರ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಕಡಿಮೆ ಮತದಾನ ದಾಖಲಾಗಿತ್ತು. ಕೃಷ್ಣರಾಜ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.58.9, ಚಾಮರಾಜ ಕ್ಷೇತ್ರದಲ್ಲಿ ಶೇ.59.2, ನರಸಿಂಹರಾಜ ಕ್ಷೇತ್ರದಲ್ಲಿ ಶೇ.61.4ರಷ್ಟು ಮತದಾನವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2013ರ ಚುನಾವಣೆಯಲ್ಲಂತೂ ಇನ್ನೂ ಕಡಿಮೆ ಮತದಾನವಾಗಿತ್ತು. ಯಾವ ಕ್ಷೇತ್ರದಲ್ಲಿಯೂ ಶೇ.60 ದಾಟಿರಲಿಲ್ಲ. ಆಗ ಚುನಾವಣೆಯಲ್ಲಿ ಕೃಷ್ಣರಾಜದಲ್ಲಿ ಶೇ.59.08, ಚಾಮರಾಜದಲ್ಲಿ ಶೇ.55.39, ನರಸಿಂಹರಾಜದಲ್ಲಿ ಶೇ.54.70ರಷ್ಟು ಮತದಾನವಾಗಿತ್ತು.

ಈ ಬಾರಿಯ 2023ರ ಚುನಾವಣೆಯಲ್ಲಿ ಮತದಾನದ ಪ್ರಮಾಣ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೈಸೂರು ನಗರದಲ್ಲಿ ಶೇ.75 ರಷ್ಟು ಮತದಾನ ದಾಖಲಾಗಬಹುದೆಂದು ಜಿಲ್ಲಾಡಳಿತ ನಿರೀಕ್ಷಿಸಿತ್ತು ಆದರೂ, ಮತದಾನ ಪ್ರಕ್ರಿಯೆ ಶೇ.70ಕ್ಕೆ ಬಂದು ನಿಂತಿದೆ.

ಮೇ 10ರ ಬೆಳಿಗ್ಗೆಯಿಂದ ನಗರದ ಮೂರು ಕ್ಷೇತ್ರಗಳಲ್ಲಿಯೂ ಮತದಾನ ಚುರುಕಾಗಿತ್ತು. ಸಂಜೆ 5 ಗಂಟೆ ವೇಳೆಗೆ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.56.5, ಚಾಮರಾಜ ಕ್ಷೇತ್ರದಲ್ಲಿ ಶೇ.55.7, ನರಸಿಂಹರಾಜ ಕ್ಷೇತ್ರದಲ್ಲಿ ಶೇ.58.7ರಷ್ಟು ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

ನಗರದ ಬೂತ್‌ಗಳಲ್ಲಿ ಹಿರಿಯ ನಾಗರಿಕರು ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾನ ಮಾಡಿದ್ದಾರೆ. ಅವರಲ್ಲಿ ಅನೇಕರು ಬೆಳಿಗ್ಗೆ ವಾಕಿಂಗ್ ನಂತರ ನೇರವಾಗಿ ಬೂತ್‌ಗಳಿಗೆ ತೆರೆಳಿಸಿದ್ದರು.

“ಕಳೆದ ಕೆಲವು ದಶಕಗಳಿಂದ, ನಾನು ಬೆಳಿಗ್ಗೆ ಬೇಗನೆ ಮತ ಚಲಾಯಿಸುತ್ತಿದ್ದೇನೆ. ಇದು ನನ್ನ ಜವಾಬ್ದಾರಿಯಾಗಿದೆ. ನನಗೆ ಯಾವುದೇ ಅಭ್ಯರ್ಥಿ ಇಷ್ಟವಾಗದಿದ್ದರೆ ನೋಟಾ ಆಯ್ಕೆಯನ್ನು ಚಲಾಯಿಸಬಹುದು” ಎಂದು ಕುವೆಂಪು ನಗರದ ನಿವೃತ್ತ ಶಿಕ್ಷಕ ಬಸವರಾಜಪ್ಪ ಎಂ.ಎಸ್ ತಿಳಿಸಿದ್ದಾರೆ.

“ಮತ ಚಲಾಯಿಸುವುದು ನಮಗೆ ಕೆಲವು ರೋಮಾಂಚಕ ಕ್ಷಣಗಳನ್ನು ನೀಡಬೇಕು. ಅದಕ್ಕಾಗಿಯೇ ನಾನು ಮನೆ ಮತದಾನವನ್ನು ತಿರಸ್ಕರಿಸಿದೆ” ಎಂದು ಅಗ್ರಹಾರದ ಹಿರಿಯ ನಾಗರಿಕ ಪ್ರಹ್ಲಾದ್ ಎಚ್.ಎಸ್ (83) ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...