ಉಡುಪಿ | ‘ಹಿಂದೂಗಳ ಸಂತತಿ ಹೆಚ್ಚಾಗಲು ಕನಿಷ್ಠ ನಾಲ್ಕು ಮಕ್ಕಳು ಹೆರಬೇಕು’ ಎಂದ ಕಾಳಹಸ್ತೇಂದ್ರ ಸ್ವಾಮೀಜಿ!

Date:

Advertisements

ಹಿಂದೂಗಳು ಸಂತತಿಯನ್ನು ಹೆಚ್ಚಿಸಿಕೊಳ್ಳಬೇಕು. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಅವರು ಬಾಂಗ್ಲಾ ಹಿಂದೂಗಳ ಮೇಲೆ ದೌರ್ಜನ್ಯ ಎಸೆಗಲಾಗುತ್ತದೆ ಎಂದು ಬುಧವಾರ ಉಡುಪಿಯಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿದ ವೇಳೆ ಈ ಹೇಳಿಕೆ ನೀಡಿದ್ದಾರೆ.

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ದಯನೀಯ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಮುಂದೆ ಭಾರತದಲ್ಲಿಯೂ ಈ ಸ್ಥಿತಿ ಬಾರದಂತೆ ಮಾಡಲು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಿದೆ. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು” ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿಯವರು ಕರೆ ನೀಡಿದ್ದಾರೆ.

Advertisements

ಮಾತೆಯರು ಅಷ್ಟ ಮಕ್ಕಳನ್ನು ಹೆತ್ತು ಹಿಂದೂ ರಾಷ್ಟ್ರಕ್ಕೆ ಕೊಡುಗೆ ನೀಡಬೇಕು, ಕಡೆಯ ಪಕ್ಷ ಕನಿಷ್ಠ ನಾಲ್ಕು ಮಕ್ಕಳಿಗಾದರೂ ಜನ್ಮ ನೀಡಬೇಕೆಂದು ಮನವಿ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಜಂಗಲ್ ರಾಜ್ ಸರಕಾರ ಅಸ್ತಿತ್ವದಲ್ಲಿದೆ. ಅಂತಾರಾಷ್ಟ್ರೀಯ ಸಂಘಟನೆಗಳ ಮೂಲಕ ಒತ್ತಡವನ್ನು ಹೇರಿ, ಅಲ್ಲಿನ ಹಿಂದೂಗಳನ್ನು ರಕ್ಷಿಸುವ ಹೊಣೆಯನ್ನು ಕೇಂದ್ರ ಸರಕಾರ ಹೊರಬೇಕು. ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ರಕ್ಷಣೆ ಸಿಗುವವರೆಗೆ ಆ ದೇಶದ ಜೊತೆಗೆ ಯಾವುದೇ ರೀತಿಯ ವ್ಯಾಪಾರ, ಕ್ರಿಕೆಟ್ ಪಂದ್ಯಾಟಗಳನ್ನು ನಡೆಸುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ತಾಳಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಪ್ರತಿಯೊಬ್ಬ ಹಿಂದೂ ಬಾಂಗ್ಲಾದೇಶದಲ್ಲಿನ ಹಿಂದೂವನ್ನು ರಕ್ಷಿಸುವಂತೆ ಆಗ್ರಹಿಸಿ, ಪೋಸ್ಟ್ ಕಾರ್ಡ್ ಬರೆದು ಕೇಂದ್ರ ಸರಕಾರಕ್ಕೆ ಕಳುಹಿಸಬೇಕು. ಸಾಮಾಜಿಕ ಜಾಲತಾಣವನ್ನು ಪ್ರಬಲವಾಗಿ ಬಳಸಿ ಸೇವ್ ಬಾಂಗ್ಲಾ ಹಿಂದೂ ಎಂಬ ಅಭಿಯಾನವನ್ನು ಆರಂಭಿಸಬೇಕು ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಎರಡು ತಿಂಗಳ ಹಿಂದೆಯೇ ಈ ಪ್ರತಿಭಟನೆ ನಡೆಯಬೇಕಿತ್ತು. ಬಾಂಗ್ಲಾದೇಶದಲ್ಲಿನ ಘಟನೆಗಳಿಗೆ ನಾವು ಸ್ಪಂದಿಸಬೇಕೆಂದು ಹಿಂದೂಗಳಿಗೆ ತಡವಾಗಿ ಅರಿವಾಗಿರುವುದು ಸರಿಯಲ್ಲ. ಹಿಂದೂಗಳಿಗೆಂದು ಇರುವ ಜಗತ್ತಿನ ಏಕೈಕ ದೇಶ ಭಾರತ. ಇಂದಿನ ಸಭೆಗೂ ಪೂರ್ಣವಾಗಿ ಹಿಂದೂಗಳು ಭಾಗವಹಿಸಿಲ್ಲ ಎಂದವರು ವಿಷಾದಿಸಿದ ಪ್ರಸಂಗ ಕೂಡ ನಡೆಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X