ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

Date:

Advertisements

“ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ. ಬಂಧನ ಆಗಿರುವುದಂತೂ ಖಚಿತ. ನಮ್ಮ ಸರ್ಕಾರವು ಸತ್ಯವನ್ನು ಹೊರತರುವುದಕ್ಕಾಗಿಯೇ ಎಸ್‌ಐಟಿಯನ್ನು ರಚಿಸಿದ್ದೇವೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಾಕ್ಷಿ ದೂರುದಾರನ ದೂರು ಆಧರಿಸಿಯೇ ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಸದ್ಯ ಎಸ್‌ಐಟಿ ತನಿಖೆ ಮುಂದುವರಿದಿದೆ. ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೆ ಯಾವ ಮಾಹಿತಿಯನ್ನೂ ಹಂಚಿಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ಅದರ ಬಗ್ಗೆ ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಇದರ ಹಿಂದೆ ದೊಡ್ಡ ಜಾಲ ಇದೆ ಎಂಬ ಬಗ್ಗೆಯೂ ಆರೋಪ ಕೇಳಿಬಂದಿದೆ. ಇದನ್ನೂ ಕೂಡ ಪತ್ತೆಯಾಗಬೇಕಲ್ಲವೇ? ಜಾಲವಿದೆಯೇ? ಇಲ್ಲವೇ ಎಂಬ ಬಗ್ಗೆಯೂ ವರದಿ ಬಂದ ಬಳಿಕವಷ್ಟೇ ನನಗೆ ಉತ್ತರಿಸಲು ಸಾಧ್ಯ. ಅಲ್ಲಿಯವರೆಗೂ ಊಹಾಪೋಹಾಗಳು ಮಾತ್ರ ಇರುತ್ತದೆ” ಎಂದು ಗೃಹ ಸಚಿವರು ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ದೂರುದಾರನ ಬಂಧನದಿಂದ ಎಸ್‌ಐಟಿ ತನಿಖೆ ನಿಲ್ಲುತ್ತದೆ ಎಂಬುದರ ಬಗ್ಗೆ ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಸುಜಾತ ಭಟ್‌ ಅವರ ಪ್ರಕರಣದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ, ಯಾವುದೇ ವಿಚಾರವನ್ನು ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಂಡಲ್ಲಿ ತನಿಖೆಗೆ ತೊಡಕಾಗುತ್ತದೆ. ಬಿಜೆಪಿಯವರು ಆರೋಪ ಮಾಡುತ್ತಲೇ ಇರುತ್ತಾರೆ. ಬೇರೆ ಬೇರೆಯವರ ಹೇಳಿಕೆಗಳನ್ನೂ ಗಮನಿಸಿದ್ದೇನೆ. ಎಲ್ಲ ಹೇಳಿಕೆಗಳ ಆಧಾರದ ಮೇಲೆ ನಾವು ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಪರಮೇಶ್ವರ್ ತಿಳಿಸಿದ್ದಾರೆ.

“ಸಾಕ್ಷಿ ದೂರುದಾರನನ್ನು ಸಂಶಯದಿಂದ ಬಂಧಿಸಲಾಗಿದೆಯೇ ಅಥವಾ ಯಾವ ಸೆಕ್ಷನ್‌ಗಳ ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬುದು ಎಲ್ಲವೂ ಎಸ್‌ಐಟಿ ತನಿಖೆಗೆ ಬಿಟ್ಟದ್ದು. ಬಂಧಿಸಿರುವುದಂತೂ ಖಚಿತ. ಸತ್ಯವನ್ನು ಹೊರತರುವುದಷ್ಟೇ ಎಸ್‌ಐಟಿ ಕೆಲಸ. ದೂರುದಾರನ ಮಂಪರು ಪರೀಕ್ಷೆ ಮಾಡಬೇಕೋ ಬೇಡವೋ ಎಂಬುದು ಎಸ್‌ಐಟಿ ಮುಖ್ಯಸ್ಥರ ಜವಾಬ್ದಾರಿ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ...

ಹಾಸನ | ಸೆಪ್ಟೆಂಬರ್ 1ರಂದು ಅಲ್ಪಸಂಖ್ಯಾತ ಸಮುದಾಯಗಳ ಕುಂದು ಕೊರತೆ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ.1 ರಂದು 10 ಗಂಟೆಗೆ ಹಾಸನ ಜಿಲ್ಲಾ ಪಂಚಾಯತ್...

ಹೊಸನಗರ | ಔಷಧಿ ಸಿಂಪಡಿಸುವಾಗ, ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಹೊಸನಗರ, ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ...

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

Download Eedina App Android / iOS

X