ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

Date:

Advertisements

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ​​ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಹನಿಟ್ರ್ಯಾಪ್ ದಂಧೆ ಆರೋಪಿಸಿ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ ಒಟ್ಟು ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿ, ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೊಡ್ಡ ದೊಡ್ಡ ಉದ್ಯಮಿ, ಸರ್ಕಾರಿ ಅಧಿಕಾರಿಗಳನ್ನು ಗುರಿ ಮಾಡಿರುವುದಾಗಿ ಆರೋಪಿಸಲಾಗಿದೆ.

Advertisements

ಅಲ್ಲದೇ, ಈ ಸಂಬಂಧ ಮಹಾರಾಷ್ಟ್ರ ಮೂಲದ ಇಬ್ಬರು ಯುವತಿಯರು ಮತ್ತು ಕಲಬುರಗಿ ಜಿಲ್ಲೆಯ ಓರ್ವ ವಿವಾಹಿತ ಮಹಿಳೆಯು ಭೀಮ್ ಆರ್ಮಿ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ಮಾಡಿದ್ದಾರೆ.

“ದಲಿತ ಸೇನೆ ರಾಜ್ಯಾಧ್ಯಕ್ಷ, ವಕೀಲರೂ ಆಗಿರುವ ಹಣಮಂತ ಯಳಸಂಗಿ ಹಾಗೂ ಸಹಚರರು ತಮ್ಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಹಲವರಿಂದ ಹಣ ಪಡೆದಿದ್ದಾರೆ. ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಯಳಸಂಗಿ ಸಹಚರ ರಾಜು ಲೆಂಗಟಿ ಬಂಧನ

ಯುವತಿಯರು ಮತ್ತು ಮಹಿಳೆಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮೂಲಕ ಹಲವರಿಂದ ಹಣ ಪಡೆದ ಆರೋಪದ ಮೇಲೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹನುಮಂತ್ ಯಳಸಂಗಿ ಅವರ ಸಹಚರ ಕಮಲಾಪುರ ಸಂಘಟನೆಯ ತಾಲೂಕು ಅಧ್ಯಕ್ಷ ರಾಜು ಲೆಂಗಟಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

image 4 1
ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಸಹಚರ ರಾಜು ಲೆಂಗಟಿ

ಈ ಪ್ರಕರಣದ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಡಿ. ಅವರು ಸಂತ್ರಸ್ತೆಯರ ಅಹವಾಲುಗಳನ್ನು ಕೇಳಿ, ಪ್ರಕರಣದ ತನಿಖೆಗೆ ಸೂಚಿಸಿದ್ದರು. ರಾಜು ಲೆಂಗಟಿಯನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಬಂಧನ ನಡೆಸಲು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X