ಮರ್ಯಾದೆಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

Date:

Advertisements

ಮತ್ತೊಂದು ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆಂಬ ಕಾರಣಕ್ಕೆ ಕೋಮುವಾದಿ, ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ತಂಗಿಯನ್ನೇ ಕೆರೆಗೆ ದೂಡಿ ಹತ್ಯೆಗೈದಿದ್ದಾನೆ. ತಂಗಿಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದುರ್ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಧನುಶ್ರೀ ಮತ್ತು ಆಕೆಯ ತಾಯಿ ಅನಿತಾ ಹತ್ಯೆಗೀಡಾದ ದುರ್ದೈವಿಗಳು. ನಿತೀಶ್‌ ಹತ್ಯೆಗೈದ ವಿಕೃತ ಆರೋಪಿ ಎಂದು ವರದಿಯಾಗಿದೆ.

ಧನುಶ್ರೀ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಆಕೆ ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದರು. ಆತನೊಂದಿಗಿನ ಪ್ರೀತಿಯನ್ನು ಬಿಟ್ಟುಬಿಡುವಂತೆ ಮನೆಯವರು ಒತ್ತಾಯಿಸಿದ್ದರು. ಆದರೂ, ಆಕೆ ಪ್ರೀತಿಯನ್ನು ಮುಂದುವರೆಸಿದ್ದರು. ಇತ್ತೀಚೆಗೆ ನಡೆದ ದೊಡ್ಡಹೆಜ್ಜೂರು ಜಾತ್ರೆಯಲ್ಲಿ ಪ್ರೇಮಿಗಳನ್ನು ನೋಡಿದ್ದ ನಿತೀಶ್ ಕೋಪಗೊಂಡಿದ್ದ. ಇದರಿಂದಾಗಿಯೇ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

Advertisements

ಧನುಶ್ರೀ ಕೊಲೆಗೆ ಸಂಚು ಹಾಕಿದ್ದ ನಿತೀಶ್, ಮಂಗಳವಾರ ರಾತ್ರಿ, ಆಕೆಯನ್ನು ಮಾತ್ರ ಕರೆದರೆ ಬರುವುದಿಲ್ಲವೆಂದು ತಮ್ಮ ತಾಯಿಯನ್ನೂ ಸಂಬಂಧಿಕರ ಮನೆಗೆ ಹೋಗಲೆಂದು ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಆದರೆ, ಮರೂರು ಗ್ರಾಮದ ಕೆರೆಯ ಬಳಿ ಅವರನ್ನು ಇಳಿಸಿದ್ದು, ಧನುಶ್ರೀಯನ್ನು ಕೆರೆಗೆ ತಳ್ಳಿದ್ದಾನೆ. ಆಕೆಯನ್ನು ರಕ್ಷಿಸಲು ಹೋದ ತಾಯಿ ಅನಿತಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾತ್ರಿ 10 ಗಂಟೆಗೆ ಮನೆಗೆ ಮರಳಿದ ಆರೋಪಿ ನಿತೀಶ್‌, ತಾನು ಎಸಗಿದ ಕೃತ್ಯದ ಬಗ್ಗೆ ತಂದೆ ಸತೀಶ್‌ಗೆ ತಿಳಿಸಿದ್ದಾನೆ. ಸತೀಶ್ ಅವರು ಮಗನ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

“ಧನುಶ್ರೀ ಪ್ರೀತಿಸುತ್ತಿದ್ದ ಯುವಕನನ್ನು ಬಿಟ್ಟುಬಿಡುವಂತೆ ಮನವೊಲಿಸಲು ಯತ್ನಿಸಿದ್ದೆವು. ಆದರೆ, ಆಕೆ ಪ್ರೀತಿಯನ್ನು ಮುಂದುವರೆಸಿದ್ದಳು. ಹೀಗಾಗಿ, ಕಳೆದ ಏಳು ತಿಂಗಳಿಂದ ಆಕೆಯ ಜೊತೆ ನಿತೀಶ್ ಮಾತು ಬಿಟ್ಟಿದ್ದ” ಎಂದು ಸತೀಶ್ ಅವರು ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಆರೋಪಿ ಮರ್ಯಾದೆಗೇಡು ಹತ್ಯೆ ಎಸಗಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X