ಹೊಸನಗರ | ಮದ್ಯದ ಅಂಗಡಿ ತೆರವಿಗೆ ಮಹಿಳೆಯರ ಆಗ್ರಹ

Date:

Advertisements

ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮೂಲಕ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರಿಗೆ ಮನವಿ ಸಲ್ಲಿಸಿದರು.

ಎಂಎಸ್‌ಐಎಲ್‌ ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, “ಈ ಗ್ರಾಮಕ್ಕೆ ಒಂದೇ ರಸ್ತೆ ಇದ್ದು, ಗ್ರಾಮಸ್ಥರು ಈ ರಸ್ತೆಯ ಮೂಲಕವೇ ನಡೆದು ಹೋಗಬೇಕಿದೆ. ಮಹಿಳೆಯರು, ಯುವತಿಯರು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಮದ್ಯದಂಗಡಿ ಬಳಿ ಬರುವ ಕೆಲ ಕಿಡಿಗೇಡಿಗಳಿಂದ ಕಿರಿಕಿರಿಯಾಗುತ್ತಿದೆ. ಕೆಲವರು ರೇಗಿಸಿದ್ದುಂಟು. ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಮದ್ಯದಂಗಡಿಯನ್ನು ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

“ಇಲ್ಲಿ ಮದ್ಯ ಖರೀದಿಸಿದ ಮದ್ಯಪ್ರಿಯರು ನಮ್ಮ ಜಮೀನಿನಲ್ಲಿ ಹಾಗೂ ಮನೆಯ ಹಿಂಭಾಗದಲ್ಲಿ ಬಂದು ಮದ್ಯ ಸೇವನೆ ಮಾಡಿ ಬಾಟಲಿಗಳನ್ನು ಮನಸೋಇಚ್ಚೆ ಪುಡಿ ಮಾಡಿ ಗ್ರಾಮದ ಸ್ವಾಸ್ಥ್ಯವನ್ನು ಹಾಳು ಮಾಡುತಿದ್ದು, ಸಂಜೆ 6 ಗಂಟೆಯ ಮೇಲೆ ಮಹಿಳೆಯರು ಮತ್ತು ಮಕ್ಕಳು ಮನೆಯಿಂದ ಹೊರಬರಲು ಆಗದಂತಹ ಸನ್ನಿವೇಶವುಂಟಾಗಿದೆ” ಎಂದು ಅಲವತ್ತುಕೊಂಡರು.

Advertisements

ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟುಹಿಡಿದು ಕುಳಿತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿ ಆಲಿಸಿದರು.

1001395772

ಅಬಕಾರಿ ಅಧಿಕಾರಿ ನಾಗರಾಜ್ ಮಾತನಾಡಿ, “ಈ ಸಮಸ್ಯೆಯ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಿತ್ಯವೂ ಈ ಭಾಗದಲ್ಲಿ ಅಬಕಾರಿ ಇಲಾಖೆಯಿಂದ ಬೀಟ್ ವ್ಯವಸ್ಥೆ ಕಲಿಸಿಕೊಡಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? 10.43 ಕೋಟಿ ಮನರೇಗಾ ದಿನಗೂಲಿಗಳ ನೋಂದಣಿ ರದ್ದು; ಬಡವರ ಬದುಕು ಕಸಿದ ಮೋದಿ ಸರ್ಕಾರ

ಪಿಎಸ್‌ಐ ಪ್ರವೀಣ್ ಎಸ್ ಪಿ ಮಾತನಾಡಿ, “ಇಲ್ಲಿನ ಸಮಸ್ಯೆಗಳ ವರದಿಯನ್ನು ಮೇಲಧಿಕಾರಿಗೆ ಕಳುಹಿಸಿಕೊಟ್ಟು ಕ್ರಮಕೈಗೊಳ್ಳಲಾಗುವುದು ಹಾಗೂ ಅಸಭ್ಯವಾಗಿ ವರ್ತಿಸುವವರ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ನಂತರ ಗ್ರಾಮ ಪಂಚಾಯಿತಿಗೆ ತೆರಳಿ ಅಧ್ಯಕ್ಷರು ಹಾಗೂ ಪಿಡಿಒಗೆ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ರವೀಂದ್ರ ಕೆರೆಹಳ್ಳಿ , ಟೀಕಪ್ಪ ಗೌಡ, ಶಾಂತಮ್ಮ, ಜಯಮ್ಮ, ಹೇಮಾವತಿ, ವನಿತಾ, ಮುರುಳಿ ಕೆರೆಹಳ್ಳಿ, ಮಂಜುನಾಥ್ ಗೌಡ, ಸಂತೋಷ್, ಸಚಿನ್ ಗೌಡ, ಅವಿನಾಶ್, ಗಣೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X