ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ; ಷರತ್ತು ಬದ್ಧ ಅನುಮತಿ

Date:

Advertisements

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆಗೆ ಹು-ಧಾ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ.

ಈ ಬಗ್ಗೆ ನ.29ರ ರಾತ್ರಿ ಆದೇಶ ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಮೈದಾನದಲ್ಲಿ ಜಯಂತಿ ಆಚರಿಸಲು ಅವಕಾಶ ನೀಡಿದೆ. ₹10 ಸಾವಿರ ಶುಲ್ಕ ಪಾವತಿಸಲು ಸೂಚಿಸಿದ್ದು, 16 ಷರತ್ತುಗಳನ್ನು ವಿಧಿಸಿದೆ.

ಈದ್ಗಾ ಮೈದಾನದಲ್ಲಿ ಕನಕ ದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಪ್ಪ ದೀವಟಗಿ ಮನವಿ ಸಲ್ಲಿಸಿದ್ದರು. ಈ ಕುರಿತು ಬುಧವಾರ ರಾತ್ರಿ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಮೇಯರ್, ಉಪಮೇಯರ್, ಸಭಾನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಇತರ ಮುಖಂಡರು ಸಭೆ ನಡೆಸಿ ಅನುಮತಿ ನೀಡಲು ನಿರ್ಧರಿಸಿದ್ದರು.

Advertisements

ಈದ್ಗಾ ಮೈದಾನದಲ್ಲಿ ಆಚರಿಸುವ ಕನಕದಾಸ ಜಯಂತಿಗೆ ಧಾರವಾಡ ಜಿಲ್ಲೆಯಿಂದ 150 ಕಾರ್ಯಕರ್ತರು ಬರುವರು. ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ. ಪೆಂಡಾಲ್ ಹಾಕಿ ಉತ್ಸವ ಆಚರಿಸುತ್ತಿದ್ದು, ಡೊಳ್ಳು ಕುಣಿತ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಸೇನಾ ಧಾರವಾಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಪಿ. ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X