ಹುಬ್ಬಳ್ಳಿ | ಪೊಲೀಸರ ಹೆಸರು ಬರೆದಿಟ್ಟು ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ

Date:

Advertisements

ಬೈಕ್‌ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರು ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರೇ ಕಾರಣವೆಂದು ಬರೆದಿಟ್ಟಿರುವುದು ಕಂಡುಬಂದಿದೆ.

ಹುಬ್ಬಳ್ಳಿಯ ಆನಂದ ನಗರ ನಿವಾಸಿ ಮಹಾಂತೇಶ್‌ ಕಲಾಲ್‌ ಎಂಬವರು ಡೆತ್‌ನೋಟ್‌ನಲ್ಲಿ ಪೊಲೀಸರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವವರು. ಅವರನ್ನು ಬೈಕ್‌ ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಕಲಾಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು, ನವೆಂಬರ್ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಲಾಗಿತ್ತು. ಆದರೆ, ನವೆಂಬರ್ 22ರಂದು ಪತ್ತೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗಲು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

Advertisements

ಇತ್ತೀಚೆಗೆ, ಅವರ ನಿವಾಸವನ್ನು ಸ್ವಚ್ಛಗೊಳಿಸುವಾಗ ಅವರು ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದೆ. “ಪೊಲೀಸರು ತಮ್ಮ ಬಳಿ ಹಣಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡಿದ್ದಾರೆ. ಬೃಂದಾವನ ಲಾಡ್ಜ್​​ಗೆ ನನ್ನನ್ನು ಎಳೆದೊಯ್ದು ಪೊಲೀಸರು ಥಳಿಸಿದ್ದಾರೆ. ನನ್ನ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಮಲ್ಲಿಕಾರ್ಜುನ, ರೇಣು, ದಾನೇಶ್, ಅರುಣ್, ಮಂಜುನಾಥ, ಕುದರಿ ಹಾಗೂ ಗೋವಿಂದ್​ ಕಾರಣ” ಎಂದು ಉಲ್ಲೇಖಿಸಿದ್ದಾರೆ.

ಡೆತ್‌ನೋಟ್‌ ಪತ್ತೆಯಾದ ಬಳಿಕ ಕಲಾಲ್‌ ಸಾವಿನ ಬಗ್ಗೆ ಮಾತನಾಡಿರುವ ಕಲಾಲ್ ಪತ್ನಿ ಪೂಜಾ, “ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ. ನಮಗೆ ನ್ಯಾಯ ಸಿಗಬೇಕು. ಕಲಾಲ್‌ ಸಾವಿಗೆ ಕಾರಣವಾದ ಪೊಲೀಸರನ್ನು ಅಮಾನತ್ತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X