ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

Date:

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ.

- Advertisement -

“ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ ವಿಳಂಬವಾಗುತ್ತಿದೆ. ಇ-ಆಸ್ತಿ, ಖಾತಾ ವರ್ಗಾವಣೆ, ಜನನ-ಮರಣ ಪತ್ರ ಸೇರಿದಂತೆ ಬಹುತೇಕ ನಾಗರಿಕ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಾರ್ವಜನಿಕರಿಗೆ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಕುರಿತ ವಿಡಿಯೋ, ಆಡಿಯೋ ಸಾಕ್ಷಿಗಳನ್ನು ನಾವು ಸಂಗ್ರಹಿಸಿದ್ದೇವೆ. ಅವುಗಳನ್ನು ಲೋಕಾಯುಕ್ತರು ಮತ್ತು ಪಾಲಿಕೆಯ ಆಯುಕ್ತರ ಗಮನಕ್ಕೆ ತರಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಚೇರಿಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇಲ್ಲವಾದಲ್ಲಿ ಬಡವರು, ಹೆಂಗಸರು, ವಯಸ್ಸಾದವರು ಎಂದು ನೋಡದೆ ಅಲೆದಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದು, ಈ ಹಿಂದೆ 9-10 ತಿಂಗಳುಗಳಿಂದ ವಿಲೇವಾರಿ ಆಗದೆ ಉಳಿದಿರುವ ಹಲವು ಅರ್ಜಿಗಳ ಸ್ವೀಕೃತಿ ಪ್ರತಿಗಳನ್ನು ಮಾಧ್ಯಮಗಳ ಎದುರಿಗೆ ಪ್ರದರ್ಶಿಸಿದರು.

“ಕಚೇರಿಯಲ್ಲಿ ಯಾವುದೇ ನಾಮಫಲಕವಾಗಲಿ, ಸಂಬಂಧಿತ ಸೇವೆಗಳ ಬಗ್ಗೆ ಮಾಹಿತಿ ಫಲಕಗಳಾಗಲಿ ಇಲ್ಲದೆ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಯಾರನ್ನು ಸಂಪರ್ಕಿಸಬೇಕೆಂದು ತಿಳಿಯದೆ ಪರದಾಡುವಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ನೀಡಲು ಕೇಂದ್ರ ನಿರಾಕರಣೆ; ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಸಹಾಯಕ ವಲಯ ಆಯುಕ್ತ ಫಕ್ಕೀರಪ್ಪ ಇಂಗಳಗಿ ಸ್ಥಳಕ್ಕೆ ಧಾವಿಸಿದ್ದು, ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಮತ್ತು ಕಚೇರಿಯ ಆಡಳಿತ ಸುಧಾರಣೆಗಾಗಿ ತಾವು ಕೈಗೊಂಡಿರುವ ಕ್ರಮಳನ್ನು ಹೋರಾಟಗಾರರಿಗೆ ವಿವರಿಸಿ, ಇನ್ನು ಎರಡು ದಿನಗಳ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲ ಹಿಂದಿನ ಕಡತಗಳನ್ನು ತೆರವುಗೊಳಿಸುವಾದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯಲು ಕೋರಿದರು.

ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ನಗರದ ಅಧ್ಯಕ್ಷ ಪರಶುರಾಮ ಮಲ್ಯಾಳ, ವೆಂಕಟೇಶ್ ಕೊಂಡಪಲ್ಲಿ, ನರಸಿಂಹ ವೆಪಚಾರಲ, ಕೊಂಡಯ್ಯ ಪೂಜಾರಿ, ನರಸಪ್ಪ ಎಲಕಪಟಿ, ಆನಂದ ಮಾದರ, ಪ್ರಶಾಂತ ಮಾದರ, ಜೀವನ ಅನಂತಪುರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...