ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಒತ್ತಾಯಿಸಿದ್ದಾರೆ.
ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಬಳಗದವರು ಹುಬ್ಬಳ್ಳಿಯ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.
“ಹುಬ್ಬಳ್ಳಿ-ಧಾರವಾಡ ಪೂರ್ವ (ಎಸ್ಸಿ ಮೀಸಲು) ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದಲ್ಲಿ ಪ್ರಸಾದ್ ಅಬ್ಬಯ್ಯ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು” ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ ಮಾಡಿದರು.
“ಯಾವುದೇ ಹಗರಣವಿಲ್ಲದ ಆರೋಪಗಳಿಲ್ಲದೆ, ಕಪ್ಪು ಚುಕ್ಕೆ ಇಲ್ಲದೆ ಹತ್ತು ವರ್ಷಗಳ ಕಾಲ ಜನಸೇವೆ ಮಾಡಿರುವ ಪ್ರಸಾದ ಅಬ್ಬಯ್ಯ ಅವರನ್ನು ಸಚಿವರನ್ನಾಗಿ ಮಾಡಿದರೆ ಹುಬ್ಬಳ್ಳಿ ಧಾರವಾಡ ಅವಳಿ ನಗರವು ಸರ್ವತೋಮುಖ ಅಭಿವೃದ್ಧಿ ಕಾಣುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಆರೋಪ ಸತ್ಯಕ್ಕೆ ದೂರವಾದ್ದು: ಎಂಟಿಬಿ ನಾಗರಾಜ್
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಪ್ರಕಾಶ ಬುರಬುರೆ ನಿರಂಜನ ಹಿರೇಮಠ, ಮೋಹನ, ಸಿದ್ದಪ್ಪ, ಮೇಟಿ ಪರುಪಪ್ಪ, ಬಳಗಣ್ಣವರ ಚನ್ನಬಸಪ್ಪ, ಅಸುಂಡಿ ಶೇಖಣ್ಣ ಬೆಂಡಿಗೇರಿ, ಕುಮಾರ ಕುಂದನಳ್ಳಿ, ಬಸವರಾಜ ಕುಂದಗೋಳ, ಅಜ್ಜಪ್ಪ ಸುರಕೋಡ ಹಾಗೂ ಇತರರು ಇದ್ದರು.