ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

Date:

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಅಧಿಕಾರಾವಧಿ ಇನ್ನು 6 ತಿಂಗಳಲ್ಲಿ ಮುಗಿಯಲಿದೆ. ಆದರೆ, ಈಗಾಗಲೇ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

- Advertisement -

ವೈದ್ಯಕೀಯ ಅಧೀಕ್ಷಕ ಡಾ. ಸಿ ಅರುಣಕುಮಾರ್‌, ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಈಶ್ವರ ಹೊಸಮನಿ, ಕ್ಷಕಿರಣ ವಿಭಾಗದ ಮುಖ್ಯಸ್ಥ ಜಿ ಸಿ ಪಾಟೀಲ, ಉಪ ವೈದ್ಯಕೀಯ ಅಧಿಕ್ಷಕ ಡಾ. ರಾಜಶೇಖರ ದ್ಯಾಬೇರಿ ಮತ್ತು ಜೀವ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ ಸಿ ಚಂದ್ರು ನಿರ್ದೇಶಕ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2019ರ ನವೆಂಬರ್‌ನಲ್ಲಿ ನಿರ್ದೇಶಕರ ಹದ್ದೆಗೆ ಆಯ್ಕೆ ಬಯಸಿ ಒಟ್ಟು 14 ವೈದ್ಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪರಿಶೀಲಿಸಿದ ಆಯ್ಕೆ ಸಮಿತಿಯು ಐವರನ್ನು ಸಂದರ್ಶನಕ್ಕೆ ಆಹ್ವಾನಿಸಿತು. ಪ್ರಭಾರಿ ನಿರ್ದೇಶಕರಾಗಿದ್ದ ಡಾ. ರಾಮಲಿಂಗಪ್ಪ ಅಂಟರತಾನಿ, ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ.ಎಫ್‌. ಕಮ್ಮಾರ, ಜೀವ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ ಸಿ ಚಂದ್ರು ಮತ್ತು ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪಿ ಕೆ ವಾರಿ ಸಂದರ್ಶನಕ್ಕೆ ಹಾಜರಾಗಿದ್ದರು. ಔಷಧ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರೇಯ ಎ ಎನ್‌  ಅವರು ಗೈರಾಗಿದ್ದರು. ಈ ವೇಳೆ ಡಾ. ರಾಮಲಿಂಗಪ್ಪ ಅಂಟರತಾನಿ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಮುಂದಿನ 6 ತಿಂಗಳಲ್ಲಿ ಇವರ ಹುದ್ದೆ ಮುಗಿಯಲಿದ್ದು, ಆಸ್ಥಾನಕ್ಕೆ ಪೈಪೋಟಿಗಳು ನಡೆಯುತ್ತಿವೆ.

ಕಿಮ್ಸ್‌ ನಿರ್ದೇಶಕರ ಆಯ್ಕೆ ಪ್ರಕ್ರಿಯೆ

ಕಿಮ್ಸ್‌ನ ಆಡಳಿತಾತ್ಮಕ ಹುದ್ದೆಯಲ್ಲಿ ಹಾಗೂ ಹಲವು ವಿಭಾಗಗಳಲ್ಲಿ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿರುವ 50 ವರ್ಷ ಮೇಲ್ಪಟ್ಟವರು ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನಿರ್ದೇಶಕರ ಆಯ್ಕೆ ಸಮಿತಿಯಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಸಚಿವರೇ ಮುಖ್ಯಸ್ಥರಾಗಿದ್ದು, ಅವರ ಸಮ್ಮುಖದಲ್ಲೇ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅದಕ್ಕೂ ಮುನ್ನ ಅರ್ಜಿಗಳನ್ನು ಪರಿಶೀಲಿಸಲು ಸರ್ಕಾರವು ಉನ್ನತ ಮಟ್ಟದ ಆಯ್ಕೆ ಸಮಿತಿ ರಚಿಸುತ್ತದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ಅರ್ಹವಾಗಿರುವುದನ್ನು ಅಂತಿಮಗೊಳಿಸಿ ಸಮಿತಿಯು ಸರ್ಕಾರದ ಮುಖ್ಯಕಾರ್ಯದರ್ಶಿಗೆ ವರದಿ ಸಲ್ಲಿಸುತ್ತದೆ. ಅದನ್ನು ಆಧರಿಸಿ ವೈದ್ಯಕೀಯ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಮುಖ್ಯ ಕಾರ್ಯದರ್ಶಿ ಒಳಗೊಂಡ ತಂಡ ನಿರ್ದೇಶಕರ ಸಂದರ್ಶನ ನಡೆಸುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | 92 ಕೆ.ಜಿ ಗಾಂಜಾ, ಕಾರು ವಶ; ಆರೋಪಿಗಳು ಪರಾರಿ

“ಕಿಮ್ಸ್‌ ನಿರ್ದೇಶಕರ ಹುದ್ದೆ ಆಯ್ಕೆ ಪ್ರಕ್ರಿಯೆ ಅಕ್ಟೋಬರ್‌ ನವೆಂಬರ್‌ ತಿಂಗಳಲ್ಲಿ ನಡೆಯಲಿದೆ. ಕೆಲ ಆಕಾಂಕ್ಷಿಗಳು ರಾಜಕೀಯ ಮುಖಂಡರು ಮತ್ತು ಸಚಿವರ ಮೂಲಕ ಒತ್ತಡ ತರುತ್ತಿದ್ದಾರೆ. ಇನ್ನೂ ಕೆಲವರು ಸೇವಾ ಹಿರಿತನ ಹಾಗೂ ಅರ್ಹತೆ ಆಧಾರದಲ್ಲಿ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ” ಎಂದು ಕಿಮ್ಸ್‌ನ ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...